ಬ್ರೇಕಿಂಗ್ ನ್ಯೂಸ್
01-01-24 10:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.
A class 8 student, who had gone to her house to go to a party with her friends, was found dead after falling under a train along with the school bus driver at Bankanakatte in Ajjampura taluk of Chikkamagaluru district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm