ಬ್ರೇಕಿಂಗ್ ನ್ಯೂಸ್
01-01-24 10:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.
A class 8 student, who had gone to her house to go to a party with her friends, was found dead after falling under a train along with the school bus driver at Bankanakatte in Ajjampura taluk of Chikkamagaluru district.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm