ಬ್ರೇಕಿಂಗ್ ನ್ಯೂಸ್
02-01-24 03:19 pm HK News Desk ಕರ್ನಾಟಕ
ಹಾಸನ, ಜ.2: ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ ತಾಲೂಕು ಸೀಗೆ ಗ್ರಾಮದ ತೀರ್ಥ ಎಂಬವರ ಪತ್ನಿ ಶಿವಮ್ಮ (36), ಮಕ್ಕಳಾದ ಸಿಂಚು (7) ಪವನ (10) ಸಾವಿಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಮೇಲ್ಛಾವಣಿಗೆ ಹೋಗಿ ಮಲಗಿದ್ದರು.
ಬೆಳಗ್ಗೆ ಮತ್ತೆ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡು ಮನೆ ಮಾಲೀಕರ ನೆರವಿನಲ್ಲಿ ಬಾಗಿಲು ತೆರೆದಿದ್ದಾರೆ. ಮನೆಯ ಒಳಗೆ ಗಾಢವಾದ ಎಲ್ಪಿಜಿ ಗ್ಯಾಸ್ ವಾಸನೆ ತುಂಬಿತ್ತು. ಮನೆಯ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಮಲಗಿದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
In a tragic incident, a mother committed suicide along with her two children by filling poisonous gas inside her house by keeping the windows and doors of her house closed on Tuesday morning. The deceased have been identified as Shivamma (36), wife of Theertha of Seege village in Hassan taluk and her children Sinchu (7) and Pavana (10).
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm