ಬ್ರೇಕಿಂಗ್ ನ್ಯೂಸ್
02-01-24 09:19 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 02: ಶ್ರೀರಾಮ ಧರ್ಮದ ಪರ ಕೆಲಸ ಮಾಡಿದ, ಎಲ್ಲರಿಗೂ ನ್ಯಾಯ ಕೊಟ್ಟ. ಆದರೆ ನಿಮ್ಮ ಸಿದ್ದರಾಮಯ್ಯ ಎಲ್ಲರಿಗೂ ನ್ಯಾಯ ಕೊಟ್ಟರಾ ಎಂದು ಮಾಜಿ ಸಚಿವ ಆಂಜನೇಯ ವಿರುದ್ಧ ಸಿ.ಟಿ.ರವಿ ಕಿಡಿಕಾರಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಿಮ್ಮ ಹೆಸರು ಆಂಜನೇಯ; ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದಾನೆಂದು ಹೇಳಿದ್ರಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಇಟ್ಟ 11ಸಾವಿರ ಕೋಟಿ ವಾಪಸ್ ತಗೆದುಕೊಂಡ್ರಿ, ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತ ರಿಗೆ 10 ಸಾವಿರ ಕೋಟಿ ಇಟ್ಟರು, ಒಬ್ಬರಿಗೆ ಅನ್ಯಾಯ ಮಾಡುವವರೂ ರಾಮನಿಗೆ ಸಮನಾಗಲು ಸಾಧ್ಯವೇ ಎಂದರು.

ಅಯೋಧ್ಯೆ ಹೋರಾಟದಲ್ಲಿ ಪಾಲ್ಗೊಂಡರೆಂದು 31 ವರ್ಷದ ನಂತರ ಆ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ರಿ, ರಾಮನ ಹೆಸರು ಇಟುಕೊಂಡಿದ್ದಕ್ಕೆ ರಾಮನ ಗುಣ ಬಂದಿದೆಯೆಂದು ಭಾವಿಸಲು ಆಗುತ್ತದೆಯೋ, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ ಆದರೆ ಗುಣ ಇದೆಯೇ ಎಂದು ಪ್ರಶ್ನಿಸಿದರು.
1992ರ ಕರಸೇವೆಯಲ್ಲಿ ನಾನು ಸೇರಿದಂತೆ ಸುನಿಲ್ ಕುಮಾರ್ ಹಾಗೂ ಅನೇಕರು ಭಾಗವಹಿಸಿದ್ದರು. ನಮಗೆ ಇನ್ನೂ ಆಮಂತ್ರಣ ಬಂದಿಲ್ಲ, ಯಾರಿಗೆ ಆಮಂತ್ರಣ ಕೊಡಬೇಕು ಎಂಬ ನಿರ್ಧಾರ ಮಾಡುವ ಅಧಿಕಾರ ರಾಮಮಂದಿರ ನಿರ್ಮಾಣ ಟ್ರಸ್ಟ್ ಗೆ ಮಾತ್ರವಿದೆ. ಆ ಅಧಿಕಾರ ಪ್ರಧಾನಮಂತ್ರಿಗೂ ಇಲ್ಲ. ಅವರು ನಿರ್ಧಾರ ಮಾಡುತ್ತಾರೆ ಎಂದರು.
ಇನ್ನೂ ಕಾಲಾವಕಾಶ ಇದೆ, ಆಮಂತ್ರಣ ಪತ್ರಿಕೆ ಬರಬಹುದು, ಬರದೇ ಇರಬಹುದು, ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡಿದವರಿಗೆ ಇನ್ನೂ ಆಮಂತ್ರಣ ಬಂದಿಲ್ಲ ಎಂದರು.
ರಾಮಮಂದಿರ ಆಗಬೇಕು ಎಂದು ಕಾಂಗ್ರೆಸ್ ಯಾವತ್ತು ಬಯಸಿತ್ತು? ಕಾಂಗ್ರೆಸ್ ಬಯಸಿದ್ದರೆ ಸ್ವಾತಂತ್ರ ಭಾರತದಲ್ಲಿ ಹೋರಾಟ ಮಾಡುವ ಪ್ರಮೇಯವೇ ಬರುತ್ತಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮಂದಿರ ನಿರ್ಮಾಣ ಆಗುತ್ತಿತ್ತು. ಹೋರಾಟ ಮತ್ತು ಕರಸೇನೆ ಮಾಡುವ ಸಂದರ್ಭ ಬರುತ್ತಿರಲಿಲ್ಲ ಎಂದು ಸಿ.ಟಿ. ರವಿ ಹೇಳಿದರು.
ಸಿದ್ದರಾಮಯ್ಯ ಮಂದಿರ ನಿರ್ಮಾಣ ಹೋರಾಟ ಸಂದರ್ಭದಲ್ಲಿ ಒಂದು ಹೇಳಿಕೆಯೂ ಕೊಟ್ಟಿಲ್ಲ. ಮಾಜಿ ಸಚಿವ ಆಂಜನೇಯ ಹೇಳಿಕೆ ಕೊಟ್ಟಿಲ್ಲ. ಇದರ ಮೇಲೆ ಅವರಿಗೆ ಆಮಂತ್ರಣ ಪತ್ರಿಕೆ ಬರುತ್ತದೋ ಬಿಡುತ್ತದೆಯೋ ಗೊತ್ತಿಲ್ಲ, ಆದರೆ, ಪ್ರತಿ ಮನೆಗೆ ಮಂತ್ರಾಕ್ಷತೆ ಬಂದೇ ಬರುತ್ತದೆ. ಸಿದ್ದರಾಮಯ್ಯ ಮತ್ತು ಆಂಜನೇಯ ಅವರ ಮನೆಗೆ ಅಯೋಧ್ಯೆ ಮಂತ್ರಾಕ್ಷತೆ ತಲುಪುತ್ತದೆ ಎಂದರು.
Ct Ravi slams Cm Siddaramaiah over Ayodhya invitation. Says even I haven't got any invitation so far
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm