ಬ್ರೇಕಿಂಗ್ ನ್ಯೂಸ್
03-01-24 11:24 am HK News Desk ಕರ್ನಾಟಕ
ಹುಬ್ಬಳ್ಳಿ, ಜ 03: 31 ವರ್ಷದ ಬಳಿಕ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮಭೂಮಿ ಹೋರಾಟದ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಮೂಲಕ ರಾಮ ಜನ್ಮಭೂಮಿ ಹೋರಾಟಗಾರರಿಗೆ ಬಂಧನದ ಭೀತಿ ಶುರುವಾಗಿದೆ.
ಮೂರು ದಶಕಗಳ ಹಿಂದೆ ರಾಮ ಜನ್ಮಭೂಮಿ ಹೋರಾಟದಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಸದ್ಯ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳಿಗಾಗಿ ಏಕಾಏಕಿ ಹುಡುಕಾಟ ಆರಂಭಿಸಿದ್ದಾರೆ. 31 ವರ್ಷದ ಬಳಿಕ ಓರ್ವ ಆರೋಪಿಯನ್ನ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ.

ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಪ್ರಕರಣ ದಾಖಲಾದಾಗ ಆರೋಪಿತ ವ್ಯಕ್ತಿಗಳು 30 ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ. ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕರಸೇವೆಗೂ ಮುನ್ನ ಅಂದರೆ ಡಿಸೆಂಬರ್ 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ ಸಂಭವಿಸಿದ್ದು, ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಈ ಹಳೆ ಪ್ರಕರಣಕ್ಕೆ ಮರುಜೀವ ಕೊಡಲು ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ.
ರಾಮಜನ್ಮ ಭೂಮಿ ಹೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಶ್ರೀಕಾಂತ ಪೂಜಾರಿಯ ಮೇಲೆ ಒಟ್ಟು 15 ಪ್ರಕರಣಗಳಿರುವುದು ತಿಳಿದು ಬಂದಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ.
ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್ ದಾಖಲು. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ. ಅಕ್ರಮ ಸಾರಾಯಿ, ಸ್ಪಿರಿಟ್ ಮಾರಾಟ ಪ್ರಕರಣಗಳು ದಾಖಲಾಗಿವೆ. ಶ್ರೀಕಾಂತ ಪೂಜಾರಿಯು ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಕೇಸಿನಲ್ಲಿ ಬಂಧನವಾದ ನಂತರ ಜಾಮೀನು ಸಿಕ್ಕಿಲ್ಲ. ಹೀಗಾಗಿ ಜೈಲು ಪಾಲಾಗಿದ್ದಾರೆ.
ಇದೇ ಕೇಸಿನಲ್ಲಿ ಡಿಸೆಂಬರ್ 18 ರಂದು ಬಂಧನವಾಗಿದ್ದ ರಾಜು ಧರ್ಮದಾಸ್ಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಅವರು ಅವತ್ತೆ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿರುವ ಎಂಟು ಆರೋಪಿಗಳ ಪೈಕಿ ಐವರು ಸಾವನ್ನಪ್ಪಿದ್ದು, ಒಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ಪ್ರಮುಖ ಆರೋಪಿಯಾಗಿದ್ದಾನೆ. ಮೂಲತ ಹಿಂದೂ ಕಾರ್ಯಕರ್ತ ಮತ್ತು ಕರಸೇವಕನಾಗಿದ್ದ. 1992 ರಲ್ಲಿ ಹೊತ್ತಿಕೊಂಡ ಬೆಂಕಿ ಹುಬ್ಬಳ್ಳಿಗೂ ತಲುಪಿತು. ಇಲ್ಲಿ ಅಂಗಡಿ ಹಾಗೂ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ ಆರೋದಡಿ ಈತನ ಮೇಲೆ ಕೆಸ್ ದಾಖಲಾಗಿದ್ದು, ಬಂಧನಕ್ಕೆ ಒಳಗಾಗಿದ್ದಾನೆ.
ಆದರೆ, ಶ್ರೀಕಾಂತ ಪೂಜಾರಿ ಕುಟುಂಬಸ್ಥರು ಹೇಳುವದೇ ಬೇರೆ. ಅವರು ಈ ಪ್ರಕರಣದಲ್ಲಿ ಭಾಗಿಯಾಗಿರಲಿಲ್ಲ. ಮೊದಲಿನಿಂದಲೂ ಆಟೋ ಓಡಿಸುತ್ತಿದ್ದ. ಗಲಭೆ ಸಂದರ್ಭದಲ್ಲಿ ರಸ್ತೆ ಬದಿ ನಿಂತಿದ್ದರು. ಇದೇ ವೇಳೆ ಅವರನ್ನು ವಶಕ್ಕೆ ಪಡೆದು ಕೇಸ್ ದಾಖಲು ಮಾಡಿದ್ದಾರೆ. ಅಲ್ಲಿಂದ ಇಲ್ಲಿಯವರೆಗೂ ಆಟೋ ಓಡಿಸುತ್ತ ಜೀವನ ಸಾಗಿಸುತ್ತಿದ್ದಾರೆ. ತಲೆ ಮರೆಸಿಕೊಂಡಿಸಿಕೊಂಡಿರಲಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.

ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಸರ್ಕಾರ ಹಿಂದೂ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ ಸರ್ಕಾರ ಎಂದರು.
After a gap of 31 years, the Ramjanmabhoomi case has been revived. With this, the ram janmabhoomi activists have started fearing arrest. Three decades ago, Hindu activists were involved in the Ram Janmabhoomi movement. The Hubballi police have launched a search for the accused.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm