ಬ್ರೇಕಿಂಗ್ ನ್ಯೂಸ್
04-01-24 11:28 am Mysuru Correspondent ಕರ್ನಾಟಕ
ಮೈಸೂರು, ಜ.4: ಮೈಸೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಮತ್ತು ಟೇಕಾಫ್ ಆಗುವ ಸಂದರ್ಭದಲ್ಲಿ ಪೈಲಟ್ ಕಣ್ಣಿಗೆ ಬೀಳುವಂತೆ ಲೇಸರ್ ಕಿರಣಗಳನ್ನು ಹಾಯಿಸಿ ಕಣ್ಣು ಮಂಜಾಗಿಸುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೈಸೂರು ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮೈಸೂರು ವಿಮಾನ ನಿಲ್ದಾಣದ ಡೈರೆಕ್ಟರ್ ಜೆ.ಆರ್ ಅನೂಪ್ ಹೇಳುವ ಪ್ರಕಾರ, ಈ ರೀತಿಯ ಘಟನೆ ಹಲವು ತಿಂಗಳಿಂದ ಆಗುತ್ತಿದೆಯಂತೆ. ಲೇಸರ್ ಬೀಮ್ ಕಿರಣಗಳನ್ನು ವಿಮಾನದಲ್ಲಿ ಪೈಲಟ್ ಕುಳಿತುಕೊಳ್ಳುವ ಕಾಕ್ ಪಿಟ್ ಗೆ ಹಾಯಿಸುತ್ತಿದ್ದಾರೆ. ಅಪರಿಚಿತ ವ್ಯಕ್ತಿಗಳು ಉದ್ದೇಶಪೂರ್ವಕ ಈ ಕೃತ್ಯ ಎಸಗುತ್ತಿದ್ದಾರೆ. ಲೇಸರ್ ಟಾಯ್ಸ್ ಮಾರುಕಟ್ಟೆಯಲ್ಲಿ ಸುಲಭವಾಗಿ ಕೈಗೆ ಸಿಗುತ್ತಿದ್ದು, ಯಾರೋ ದುಷ್ಕರ್ಮಿಗಳು ಇದರಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.
ಆದರೆ ಈ ರೀತಿಯ ಲೇಸರ್ ಕಿರಣಗಳು ಪವರ್ ಫುಲ್ ಆಗಿದ್ದು ಪೈಲಟ್ ಕಣ್ಣು ತಪ್ಪಿಸುತ್ತವೆ. ಕಾಕ್ ಪಿಟ್ ಎದುರಿನ ಗ್ಲಾಸಿಗೆ ಬಿದ್ದು ಬೆಳಕು ರಿಫ್ಲೆಕ್ಟ್ ಆಗುತ್ತಿದ್ದು, ವಿಮಾನ ಟೇಕಾಫ್ ಅಥವಾ ಲ್ಯಾಂಡ್ ಆಗುವ ನಿರ್ಣಾಯಕ ಕ್ಷಣದಲ್ಲಿ ಪೈಲಟನ್ನು ಗಲಿಬಿಲಿಗೊಳಿಸುತ್ತವೆ. ಇದರಿಂದ ಏರ್ಪೋರ್ಟ್ ಭದ್ರತೆ ಮತ್ತು ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದೆ. ಹಸಿರು ಬಣ್ಣದ ಕಿರಣಗಳನ್ನು ಬೀರುವ ಲೇಸರ್ ಲೈಟ್ ಗಳನ್ನು ಹಾಕುತ್ತಿದ್ದು, ಫ್ಲಾಶ್ ಲೈಟ್ ಬಿದ್ದ ಕೂಡಲೇ ಕಣ್ಣು ಮಂಜಾಗುತ್ತದೆ. ಕೆಲವು ಸೆಕೆಂಡಿನಿಂದ ನಿಮಿಷಗಳ ವರೆಗೂ ಈ ಕಿರಣಗಳು ಪೈಲಟ್ ಕಣ್ಣಿಗೆ ಬೀಳುತ್ತವೆ. ಏರ್ಪೋರ್ಟ್ ಸುತ್ತ 25 ಕಿಮೀ ಆವರಣದಲ್ಲಿ ಲೇಸರ್ ಕಿರಣ ಹಾಯಿಸುವುದಕ್ಕೆ ನಿಷೇಧ ವಲಯ ಎಂದಿದ್ದರೂ, ಪದೇ ಪದೇ ಈ ರೀತಿಯ ಘಟನೆಗಳು ಆಗುತ್ತಿರುವುದು ಗಂಭೀರ ಅಪರಾಧವಾಗಿದೆ ಎಂದು ಅನೂಪ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಪರಿಸರದಲ್ಲಿ ಅಂತಹ ಕಾರ್ಯಕ್ರಮಗಳೇನಾದರೂ ಆಯೋಜನೆ ಆಗಿದ್ದಲ್ಲಿ ತಿಂಗಳ ಮೊದಲೇ ವಿಮಾನ ನಿಲ್ದಾಣಕ್ಕೆ ಮಾಹಿತಿ ನೀಡಬೇಕು ಎಂದಿದೆ. ಆದರೆ, ಇದು ಹಲವು ತಿಂಗಳಿನಿಂದ ಈ ರೀತಿಯ ಘಟನೆಗಳು ಆಗುತ್ತಿರುವುದರಿಂದ ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಕೃತ್ಯ ಎಸಗುತ್ತಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಏರ್ಪೋರ್ಟ್ ಅಧಿಕಾರಿಗಳ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Pilots landing at Mysuru airport have complained of laser beamed at the cockpit causing disturbance and jeopardizing flight safety. The authorities at the airport have lodged a police complaint regarding this and though the incidents are being investigated, nobody has been identified or held so far.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm