ಬ್ರೇಕಿಂಗ್ ನ್ಯೂಸ್
04-01-24 08:18 pm Mangaluru Correspondent ಕರ್ನಾಟಕ
ಬೆಂಗಳೂರು ಜ 03: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದರು.
ಕರಸೇವಕ ಶ್ರೀಕಾಂತ ಪೂಜಾರಿ ಅವರ ವಿರುದ್ಧ ಬೇರೆ ಪ್ರಕರಣಗಳಿವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೇರೆ ಪ್ರಕರಣಗಳಲ್ಲಿ ಯಾರೂ ಸಿಗದಿದ್ದಾಗ ಶ್ರೀಕಾಂತ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶ್ರೀಕಾಂತ ಅವರು ಗಾಯಗೊಂಡಿದ್ದು, ಬದುಕು ಸಾವಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಬಂಧಿಸುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ.
ಕಾಂಗ್ರೆಸ್ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್ ಎಂದು ಹೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್ ಎನ್ನುವುದಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಶಶಿ ತರೂರ್ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು
R. Ashok criticizes According to Siddaramaiah, he enters mosques but not temples. Lately, instead of going inside the temple, he went to the mosque while donning the Muslim headgear. He blasted, saying he needed Muslims and doesn't want Hindus.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm