ಬ್ರೇಕಿಂಗ್ ನ್ಯೂಸ್
05-01-24 05:45 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.05: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಇಂದು ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತು. ಶ್ರೀಕಾಂತ್ ಅವರನ್ನು 31 ವರ್ಷಗಳಷ್ಟು ಹಳೆಯ ಪ್ರಕರಣದಲ್ಲಿ ಪೊಲೀಸರು ಡಿಸೆಂಬರ್ 29ರಂದು ಬಂಧಿಸಿದ್ದರು. ಈ ಬಂಧನ ಪ್ರಕರಣ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಶ್ರೀಕಾಂತ್ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿತ್ತು.
1992 ಡಿಸೆಂಬರ್ 5ರಂದು ನಡೆದಿದ್ದ ರಾಮ ಜನ್ಮಭೂಮಿ ಹೋರಾಟದ ವೇಳೆ ನಡೆದ ಗಲಭೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು.

ನಾಳೆ ಬಿಡುಗಡೆ ಸಾಧ್ಯತೆ:
ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿರುವುದು ಖುಷಿ ತಂದಿದೆ. ಷರತ್ತುಗಳ ಬಗ್ಗೆ ಜಾಮೀನು ಪ್ರತಿ ಕೈಸೇರಿದ ನಂತರವೇ ಗೊತ್ತಾಗಲಿದೆ. ನಾಳೆ ಸಾಯಂಕಾಲದೊಳಗೆ ಶ್ರೀಕಾಂತ್ ಪೂಜಾರಿಯನ್ನು ಬಿಡುಗಡೆ ಮಾಡುವ ಭರವಸೆ ಇದೆ" ಎಂದು ಆರೋಪಿ ಪರ ವಕೀಲ ಸಂಜಯ ಬಡಸ್ಕರ್ ಹೇಳಿದರು
''ಹಿಂದೂ ಸಮಾಜವನ್ನು ಹೆದರಿಸುವ ಉದ್ದೇಶದಿಂದ ಸಾಕಷ್ಟು ಷಡ್ಯಂತ್ರ ಮಾಡಿದವರಿಗೆ ತಕ್ಕ ಉತ್ತರ ಸಿಕ್ಕಿದೆ. ದೇಶವೇ ಹೆಮ್ಮೆಪಡುವ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಕೋಮುವಾದ ಹಾಗೂ ಅಶಾಂತಿ ಹುಟ್ಟಿಸುವ ಹುನ್ನಾರ ನಡೆಸಿದವರಿಗೆ ಉತ್ತರ ಸಿಕ್ಕಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರಲು ಮಾಡಿರುವ ಷಡ್ಯಂತ್ರಕ್ಕೆ ತಕ್ಕ ಶಾಸ್ತಿಯಾಗಿದೆ'' ಎಂದು ವಕೀಲ ಹಾಗೂ ವಿಎಚ್ಪಿ ಮುಖಂಡ ಅಶೋಕ ಅಣ್ವೇಕರ ಪ್ರತಿಕ್ರಿಯಿಸಿದರು.
ನಮ್ಮ ತಂದೆಗೆ ಜಾಮೀನು ದೊರೆತಿರುವುದು ಖುಷಿ ತಂದಿದೆ. ಕೋರ್ಟ್ಗೆ ಹಾಗೂ ವಕೀಲರಿಗೆ ಧನ್ಯವಾದ ತಿಳಿಸುತ್ತೇನೆ'' ಎಂದು ಶ್ರೀಕಾಂತ್ ಪೂಜಾರಿ ಪುತ್ರ ಮಂಜುನಾಥ ಪೂಜಾರಿ ಹೇಳಿದರು.
Hubbali right wing activist Srikanth Poojari granted bail by Hubballi court. The court in Hubballi granted bail on Friday to Hindu activist Srikanth Poojari, who was recently arrested for allegedly being involved in riots after the demolition of the Babri Masjid in Ayodhya back in 1992. The BJP has launched a massive protest across the state against the Congress government and alleged it as an anti-Hindu government.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm