ಬ್ರೇಕಿಂಗ್ ನ್ಯೂಸ್
05-01-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜ 05: ನನ್ನ ಮಾನ ಹಾನಿ ಮಾಡುವ ಪೋಸ್ಟ್ ಅನ್ನು ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಮಾಜಿ ಶಾಸಕ ಸಿ ಟಿ ರವಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ʼನಾನು ಕರಸೇವಕ, ನನ್ನನ್ನೂ ಬಂಧಿಸಿʼ ಎಂಬ ಬಿಜೆಪಿಯ ಅಭಿಯಾನವನ್ನು ವ್ಯಂಗ್ಯಾತ್ಮಕವಾಗಿ ಟೀಕಿಸಿದ್ದ ಕಾಂಗ್ರೆಸ್, ಸಿ ಟಿ ರವಿ ಅವರನ್ನು ಉಲ್ಲೇಖಿಸಿ ʼ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನೂ ಬಂಧಿಸಿʼ ಎಂಬ ಪೋಸ್ಟರ್ ಟ್ವೀಟ್ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿ ಟಿ ರವಿ, ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ. ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ. ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪರಿಶೀಲನೆ ನಡೆಸಿ ನನ್ನ ಚಾಲಕ ಕಾರನ್ನು ಚಲಾಯಿಸುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದರು ಎಂದು ಹೇಳಿದ್ದಾರೆ.
ಈ ಕಾರಣಕ್ಕೇ ನಿಮ್ಮದೇ ಸರ್ಕಾರ ಇದ್ದರೂ ಅಂದು ನನ್ನ ಮೇಲೆ ಕೇಸು ದಾಖಲಾಗಲಿಲ್ಲ. ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡುವ, ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ !
— C T Ravi 🇮🇳 ಸಿ ಟಿ ರವಿ (@CTRavi_BJP) January 5, 2024
ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ.
ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು… https://t.co/CQ81zGDmaR
,@BJP4Karnataka ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು! @CTRavi_BJP ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? pic.twitter.com/jn3lQUm2Nn
— Karnataka Congress (@INCKarnataka) January 5, 2024
Congress tweets edited pic of CT Ravi Saying i have killed two in car accident arrest me, tweet war. Ct Ravi has asked congress to delete the tweet or else would take legal action.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm