ಬ್ರೇಕಿಂಗ್ ನ್ಯೂಸ್
05-01-24 10:12 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠ, ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಇದೇ ವೇಳೆ, ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಲ್ಲದೆ ಸಿಬಿಐ ಅರ್ಜಿ ಸಂಬಂಧ ಡಿಕೆ ಶಿವಕುಮಾರ್ಗೆ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೂಕ್ತವೆನಿಸಿದ ವಿಸ್ತೃತ ಪೀಠ ರಚಿಸಬಹುದು ಎಂದು ಏಕ ಸದಸ್ಯ ಪೀಠ ಹೇಳಿದೆ. ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್, ಸಿಬಿಐ ಹಾಗೂ ಶಾಸಕ ಯತ್ನಾಳ್ ಪರ ವಾದ ವಿರೋಧಿಸಿದರು. ಅನುಮತಿ ನೀಡಿದ ನಂತರ ಹಿಂಪಡೆಯುವಂತಿಲ್ಲವೆಂದು ಸಿಬಿಐ ವಾದ ಮಂಡಿಸಿದೆ. ಎರಡೂ ಕಡೆ ವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
The Central Bureau of Investigation (CBI) on Friday moved the High Court of Karnataka questioning the State government’s November 28, 2023, order of withdrawing consent granted to it on September 25, 2019, to probe a ₹74.93-crore disproportionate assets case registered against Deputy Chief Minister D.K. Shivakumar.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am