ಬ್ರೇಕಿಂಗ್ ನ್ಯೂಸ್
06-01-24 01:34 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.06: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇತರ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ಅರಕಲಕೂಡಿನ ಮಣಿಕಂಠ (26), ಪವನ್ (23), ಚಂದನ್ (31) ಹಾಗೂ ಹರೀಶ್ (34) ಎಂದು ಗುರುತಿಸಲಾಗಿದೆ.
ಮೊದಲು, ಬೆಂಗಳೂರಿನಿಂದ ಶಿರಡಿ ಹಾಗೂ ಗೋವಾಕ್ಕೆ ಹೊರಟಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಎರಡೂ ಕಾರಿನಲ್ಲಿದ್ದ 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆಗ ಇಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ನಾಲ್ಕು ಜನರು ರಸ್ತೆ ಪಕ್ಕದಲ್ಲಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ಹಾವೇರಿ ಕಡೆಯಿಂದ ಬಂದ ಲಾರಿಯು ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಪಕ್ಕದಲ್ಲೇ ನಿಂತಿದ್ದ ನಾಲ್ವರೂ ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಹಾಗೂ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಶವಗಳನ್ನು ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕುಂದಗೋಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಬಗ್ಗೆ ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಲಾಗಿದೆ. ಬೆಳಗ್ಗೆ ಮಂಜು ಆವರಿಸಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂಬ ಸಂಶಯವಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ' ಎಂದು ಎಸ್ಪಿ ಗೋಪಾಲ್ ಬ್ಯಾಕೋಡ್ ಮಾಹಿತಿ ನೀಡಿದ್ದಾರೆ.
Hubli accident, car truck, four youths from hassan killed on spot.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm