ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm