ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am