ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am