Narayana Gowda finally gets bail by court, KARAVE: ಪ್ರತಿಭಟನೆಯಲ್ಲಿ ಸಾರ್ವಜನಿಕ ಅಸ್ತಿಪಾಸ್ತಿ ಹಾಳು ; ಕರವೇ ನಾರಾಯಣ ಗೌಡಗೆ ಕೊನೆಗೂ ಸಿಕ್ತು ಜಾಮೀನು, ಸೋಮವಾರ ಜೈಲಿನಿಂದ ರಿಲೀಸು

06-01-24 08:24 pm       Bangalore Correspondent   ಕರ್ನಾಟಕ

ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು, ಜ 06: ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ನಾರಾಯಣ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ಕರವೇ ಅಧ್ಯಕ್ಷನಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಡಿಸೆಂಬರ್‌ 27ರಂದು ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡ  ಸೇರಿದಂತೆ 29 ಜನರನ್ನು ಬಂಧಿಸಲಾಗಿದ್ದು, ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು

ಪ್ರತಿಭಟನೆ ವೇಳೆ ಕನ್ನಡಪರ ಕಾರ್ಯಕರ್ತರು ಬೃಹತ್ ಫ್ಲೆಕ್ಸ್​ಗಳನ್ನು ಹರಿದು ಹಾಕಿದ್ದರು. ಬೋರ್ಡ್​ಗಳನ್ನು ಒಡೆದು ಹಾಕಿದ್ದರು. ಸಾರ್ವಜನಿಕ ಅಸ್ತಿಪಾಸ್ತಿ ಹಾಳು ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕರವೇ ನಾರಾಯಣ ಗೌಡ ಸೇರಿದಂತೆ 29 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಹೆದ್ದಾರಿ ತಡೆ, ಸಾರ್ವಜನಿಕ ಅಸ್ತಿ ಹಾನಿ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿದ್ದವು.

ನಾರಾಯಣ ಗೌಡ ಪರ ವಕೀಲ ಕುಮಾರ್ ಮಾತನಾಡಿ ಗೌಡ್ರು ಸೋಮವಾರ ಜೈಲಿಂದ ರಿಲೀಸ್ ಆಗೋದು ಪಕ್ಕ, ಬೇಲ್ ಅಪ್ಲಿಕೇಶನ್ ಗೆ ಸಾಕಷ್ಟು ಪ್ರೊಸೀಜರ್ಗಳು ಇರುವ ಕಾರಣ ಸೋಮವಾರ ಗೌಡ್ರು ಹಾಗೂ ಕಾರ್ಯಕರ್ತರು ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗ್ತಾರೆ ಎಂದು ತಿಳಿಸಿದ್ದಾರೆ.

Narayana Gowda finally gets bail by court, to be released from Jail on 8th of January.