ಬ್ರೇಕಿಂಗ್ ನ್ಯೂಸ್
07-01-24 03:08 pm HK News Desk ಕರ್ನಾಟಕ
ಬೆಳಗಾವಿ, ಜ.7: ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿದ್ದ ಅಕ್ಕ, ತಮ್ಮನನ್ನು ಮುಸ್ಲಿಂ ಯವಕರ ಗುಂಪು ನಾಲ್ಕು ಗಂಟೆ ಕಾಲ ಕೋಣೆಯಲ್ಲಿ ಕೂಡಿಹಾಕಿ ಮನಬಂದಂತೆ ಥಳಿಸಿದ ಘಟನೆ ಬೆಳಗಾವಿ ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ಮುಸ್ಲಿಂ ಹಿಂದು ಯುವಕನ ಜೊತೆಗಿದ್ದಾನೆಂದು ತಿಳಿದು ಯುವಕರು ಇಬ್ಬರಿಗೂ ಹಲ್ಲೆ ನಡೆಸಿದ್ದಾರೆ.
ಯುವತಿ ಮುಖಕ್ಕೆ ಬಟ್ಟೆ ಮುಚ್ಚಿಕೊಂಡಿದ್ದರಿಂದ ಮುಸ್ಲಿಂ ಎಂದು ತಿಳಿದುಕೊಂಡಿದ್ದರು. ಯುವಕ ಹಣೆಗೆ ತಿಲಕ ಹಾಕಿದ್ದರಿಂದ ಮುಸ್ಲಿಂ ಯುವತಿಯ ಜೊತೆಗಿದ್ದಾನೆಂದು ಇವರು ಅನ್ಯಕೋಮಿ ಜೋಡಿ ಅನ್ಕೊಂಡಿದ್ದಾರೆ. ತಾವು ಅಕ್ಕ, ತಮ್ಮ ಎಂದು ತಿಳಿಸಿದರೂ ಮುಸ್ಲಿಂ ಯುವಕರ ಗುಂಪು ಮನಬಂದಂತೆ ಧಳಿಸಿದ್ದಾರೆ. ಯುವಕ ಪಕ್ಕೆಲುಬು ಭಾಗಕ್ಕೆ ತೀವ್ರ ಗಾಯಗೊಂಡಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 16 ಜನ ಮುಸ್ಲಿಂ ಯುವಕರ ಗ್ಯಾಂಗ್ ಕೃತ್ಯ ಎಸಗಿದ್ದು ನೈತಿಕ ಪೊಲೀಸಗಿರಿ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಬೆಳಗಾವಿ ಕೋಟೆ ಕರೆ ಆವರಣದಲ್ಲಿರುವ ಕಂಪ್ಯೂಟರ್ ಸೆಂಟರಿಗೆ 24 ವರ್ಷದ ಯುವತಿ ಜೊತೆ 21 ವರ್ಷದ ಸಚೀನ್ ಲಮಾನಿ ಎಂಬ ಯುವಕ ಬಂದಿದ್ದು ಯುವನಿಧಿ ಫಾರ್ಮ್ ತುಂಬಲು ಬಂದಾಗ ಕಂಪ್ಯೂಟರ್ ಸೆಂಟರ್ ಮಾಲಿಕ ಅರ್ಧ ಗಂಟೆ ಬಿಟ್ಟು ಬನ್ನಿ ಎಂದು ಹೇಳಿದ್ದರು. ಬಳಿಕ ಇವರಿಬ್ಬರು ಅಕ್ಕ ತಮ್ಮಾ ಬೆಳಗಾವಿ ಕೋಟೆ ಕೆರೆ ಆವರಣದಲ್ಲಿ ಕುಳಿತಿದ್ದನ್ನು ನೋಡಿದ ಕಿರಾತಕರು ಯುವಕ, ಯುವತಿಯನ್ನು ಅಪಹರಿಸಿ ಮನೆಯೊಂದರಲ್ಲಿ ನಾಲ್ಕು ಗಂಟೆ ವರೆಗೆ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಹಲ್ಲೆಗೋಳಗಾದ ಯುವಕ ಮತ್ತು ಯುವತಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕ- ಯುವತಿಯ ತಂದೆ ಮುಸ್ಲಿಂ, ತಾಯಿ ಹಿಂದುವಾಗಿದ್ದು ಇವರ ಬಗ್ಗೆ ತಿಳಿದಿದ್ದರೂ ಯುವಕರ ತಂಡ ಹಲ್ಲೆ ಕೃತ್ಯ ನಡೆಸಿದೆ ಎನ್ನಲಾಗಿದೆ.
ಮುಸ್ಲಿಂ ಯುವಕರ ಪೊಲೀಸ್ ಗಿರಿ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಪೊಲೀಸರು 7 ಜನ ದುಷ್ಕರ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತರಾಗಿದ್ದಾರೆ. ಮಾರ್ಕೆಟ್ ಠಾಣೆ ಪೊಲೀಸರು 17 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಲಂಬಾಣಿ ಯಜವಕನಾದ್ದರಿಂದ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಸೇರಿ 10 ಕಲಂ ಬಳಸಿ ದೂರು ದಾಖಲಾಗಿದೆ.
A group of youth confined boy and a girl in a room and assaulted them in a case of “moral” policing in Belagavi on Saturday. According to police, the boy and girl - residents of Yamnapur on the city outskirts - had come to register their names for Yuva Nidhi scheme. They could not get the registration completed due to server issues. Both were sitting on a bench on the Fort Lake premises.
21-02-25 10:47 pm
Bangalore Correspondent
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
Siddaramaiah, MUDA case, Vijayendra: ಮುಡಾ ಹಗರ...
20-02-25 10:06 pm
22-02-25 09:48 pm
HK News Desk
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
Kasargod News, Crime: ಉಕ್ಕಿನಡ್ಕ ; ಕೆರೆಗೆ ಬಿದ್...
22-02-25 01:31 pm
Donald Trump, Modi, India: ಭಾರತದಲ್ಲಿ ಮೋದಿಯನ್ನ...
21-02-25 01:23 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm