ಬ್ರೇಕಿಂಗ್ ನ್ಯೂಸ್
08-01-24 02:52 pm HK News Desk ಕರ್ನಾಟಕ
ಬೆಳಗಾವಿ, ಜ.8: ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ತಾವಾಗೇ ಅವನ್ನು ಕಿತ್ತು ಹಾಕಬೇಕು. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, 500 ವರ್ಷದ ಕೆಳಗೆ ರಾಮ ಹುಟ್ಟಿದ ಜಾಗದಲ್ಲಿದ್ದ ದೇವಸ್ಥಾನ ಕಿತ್ತು ಹಾಕಿದ್ದರು. ಬಾಬರ್ ನಂತವನು ಬಂದು ಬಾಬ್ರಿ ಮಸೀದಿ ಕಟ್ಟಿದ್ದ. ಬಾಬ್ರಿ ಮಸೀದಿ ಅಂದ್ರೆ ಹೇಗೆ? ಈಗ ಯಾರಾದ್ರೂ ಮಂದಿರ ಕೆಡವಿ ಮಸೀದಿ ಕಟ್ಟಿದರೆ ಅವರಪ್ಪನಿಗೆ ಹುಟ್ಟಿದೋನು ಅಂತ ಕರೀತಿನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಮಥುರಾದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಲಾಠಿ ಗೋಲಿ ಖಾಯೆಂಗೆ ಮಂದಿರ ವಹಿ ಬನಾಯೇಂಗೆ ಎಂದು ಕೂಗ್ತಿದ್ದೆವು. ಇನ್ನೆರಡು ದೇವಸ್ಥಾನಗಳಿಗೆ ಕೋರ್ಟ್ ಆದೇಶ ನೀಡಿದೆ. ಅಲ್ಲಿರುವ ಮಸೀದಿಗಳು ಧ್ವಂಸ ಆಗುತ್ತೆ, ದೇವಸ್ಥಾನ ತಲೆ ಎತ್ತುತ್ತದೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ನೀವಾಗಿ ನೀವೇ ಕಿತ್ತು ಹಾಕಬೇಕು. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದಿದ್ದಾರೆ.
ಸಿದ್ದರಾಮಯ್ಯ ನಾವು ಜಾತ್ಯತೀತವಾದಿಗಳು ಅಂತಾರೆ. ನಾವು ನಿಮಗಿಂತ ಜಾತ್ಯತೀತವಾದಿಗಳು. ಹಿಂದೂ ಮುಸ್ಲಿಂ ಅನ್ಯೋನ್ಯವಾಗಿರಬೇಕು ಎನ್ನುವವರು ನಾವು. ನೀವು ನಮಾಜ್ ಮಾಡ್ಕೊಳ್ಳಿ, ನಾವು ಅದರ ತಂಟೆಗೆ ಬರಲ್ಲ. ಬಾಬರ್ ಕಟ್ಟಡ ಈ ದೇಶದ ಜನರಿಗೆ ನೀವು ಗುಲಾಮರಾಗಿದ್ದಿರಿ ಅಂತ ಹೇಳ್ತಿತ್ತು. ನೀವಾಗಿ ನೀವೇ ಮಥುರಾ ಹಾಗೂ ಕೃಷ್ಣಾದ ಮಸೀದಿ ತೆಗೆಯಿರಿ. ತೆಗೆಯದಿದ್ದರೆ ಕೊಲೆಗಳಾಗುತ್ತೊ ಇನ್ನೇನಾಗುತ್ತೊ ಗೊತ್ತಿಲ್ಲ. ಅಧಿಕಾರದಾಸೆಗೆ ಪಾಕಿಸ್ತಾನವನ್ನು ನೆಹರೂ ಮಾಡಿದರು. ಈ ದೇಶದಲ್ಲಿ ಈಗಾಗಲೇ ತ್ರಿವಳಿ ತಲಾಕ್ ಬಂದಿದೆ. ಒಂದು ಗಂಡಿಗೆ ಒಂದು ಹೆಣ್ಣು ಎಂದು ಸಂದೇಶ ಸಾರಿದೆ. ನಮಗೆ ಒಂದು ಹೆಣ್ಣು ಒಂದು ಗಂಡು ಇತ್ತು. ಆದರೆ ಮುಸ್ಲಿಮರಿಗೆ ಹಮ್ ಪಾಂಚ್ ಹಮ್ಕೊ ಪಚ್ಚಿಸ್ ಎಂಬಂತಾಗಿದೆ.
ಗೋವು ನಮ್ಮ ತಾಯಿ. ಗೋಹತ್ಯೆ ನಿಷೇಧ ಮಾಡಿದ್ದೀವಿ. ಗೋಹತ್ಯೆ ನಿಷೇಧ ಕಾಯ್ದೆಯನ್ನು ತಾಕತ್ತಿದ್ದರೆ ಹಿಂಪಡೆಯಿರಿ. ಅದನ್ನ ನಾವು ಹಿಂದೆ ತೆಗೆದುಕೊಳ್ಳಲು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
KS Eshwarappa, former Karnataka Chief Minister and senior Bharatiya Janata Party (BJP) leader, on Sunday again warned the Muslims of dire consequences if they did not vacate the mosques allegedly constructed on demolished temple lands.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm