ಬ್ರೇಕಿಂಗ್ ನ್ಯೂಸ್
08-01-24 07:18 pm HK News Desk ಕರ್ನಾಟಕ
Photo credits : Tv 9 Kannada
ಗದಗ, ಜ 08: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳಲ್ಲಿ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ಕರೆಂಟ್ ಶಾಕ್ ಹೊಡೆದು ಮೂವರು ಅಭಿಮಾನಿಗಳು ಮೃತಪಟ್ಟಿದ್ರು. ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್ ಕ್ಯಾನ್ಸಲ್ ಮಾಡಿ ನಟ ಯಶ್ ಕೂಡ ಗದಗಕ್ಕೆ ಬಂದಿದ್ದಾರೆ.
ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಯಶ್, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಟಗಿಗೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಶೂಟಿಂಗ್ ಬಿಟ್ಟು ಗದಗಕ್ಕೆ ಓಡೋಡಿ ಬಂದ ಯಶ್ ಮೊದಲು ಮೃತ ಮುರಳಿ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಕಿಂಗ್ ಸ್ಟಾರ್ ಯಶ್ ನೋಡಲು ಅಕ್ಕ-ಪಕ್ಕದ ಊರುಗಳಿಂದ ಜನಸಾಗರವೆ ಹರಿದು ಬಂದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು.

ವಿದ್ಯುತ್ ಸ್ಪರ್ಶಿಸಿ ಮೂವರ ಸಾವು ;
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್ಡೇ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.


ಯಶ್ ಬರಬೇಕು ಎಂದು ಅಭಿಮಾನಿಗಳ ಪಟ್ಟು ;
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕು, ಪಟ್ಟು ಹಿಡಿದ ಅಭಿಮಾನಿಗಳು ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಎಂಬ ಆಗ್ರಹ ಕೇಳಿ ಬಂದಿದೆ. ಯಶ್ ನಮ್ಮೂರಿಗೆ ಬರಬೇಕು. ಬಂದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಮೃತ ಯುವಕರ ಗೆಳೆಯ ಪ್ರಕಾಶ ಮ್ಯಾಗೇರಿ ಆಗ್ರಹಿಸಿದ್ದರು. ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಗಾಯಾಳುಗಳ ಜೊತೆ ಮಾತನಾಡಿ ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದ್ದಾರೆ.
2 ಲಕ್ಷ ಪರಿಹಾರ, ಗಾಯಾಳುಗಳಿಗೆ 50 ಸಾವಿರ ;
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
3 fans electrocuted on Yash Birthday, Actor Yash reaches Gadag consoles family members. Three men were electrocuted in Karnataka’s Gadag district early on Monday when they were installing a flex to celebrate Kannada film actor Yash’s birthday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm