ಬ್ರೇಕಿಂಗ್ ನ್ಯೂಸ್
08-01-24 07:18 pm HK News Desk ಕರ್ನಾಟಕ
Photo credits : Tv 9 Kannada
ಗದಗ, ಜ 08: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳಲ್ಲಿ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ಕರೆಂಟ್ ಶಾಕ್ ಹೊಡೆದು ಮೂವರು ಅಭಿಮಾನಿಗಳು ಮೃತಪಟ್ಟಿದ್ರು. ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್ ಕ್ಯಾನ್ಸಲ್ ಮಾಡಿ ನಟ ಯಶ್ ಕೂಡ ಗದಗಕ್ಕೆ ಬಂದಿದ್ದಾರೆ.
ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಯಶ್, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಟಗಿಗೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಶೂಟಿಂಗ್ ಬಿಟ್ಟು ಗದಗಕ್ಕೆ ಓಡೋಡಿ ಬಂದ ಯಶ್ ಮೊದಲು ಮೃತ ಮುರಳಿ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಕಿಂಗ್ ಸ್ಟಾರ್ ಯಶ್ ನೋಡಲು ಅಕ್ಕ-ಪಕ್ಕದ ಊರುಗಳಿಂದ ಜನಸಾಗರವೆ ಹರಿದು ಬಂದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು.

ವಿದ್ಯುತ್ ಸ್ಪರ್ಶಿಸಿ ಮೂವರ ಸಾವು ;
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್ಡೇ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.


ಯಶ್ ಬರಬೇಕು ಎಂದು ಅಭಿಮಾನಿಗಳ ಪಟ್ಟು ;
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕು, ಪಟ್ಟು ಹಿಡಿದ ಅಭಿಮಾನಿಗಳು ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಎಂಬ ಆಗ್ರಹ ಕೇಳಿ ಬಂದಿದೆ. ಯಶ್ ನಮ್ಮೂರಿಗೆ ಬರಬೇಕು. ಬಂದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಮೃತ ಯುವಕರ ಗೆಳೆಯ ಪ್ರಕಾಶ ಮ್ಯಾಗೇರಿ ಆಗ್ರಹಿಸಿದ್ದರು. ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಗಾಯಾಳುಗಳ ಜೊತೆ ಮಾತನಾಡಿ ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದ್ದಾರೆ.
2 ಲಕ್ಷ ಪರಿಹಾರ, ಗಾಯಾಳುಗಳಿಗೆ 50 ಸಾವಿರ ;
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
3 fans electrocuted on Yash Birthday, Actor Yash reaches Gadag consoles family members. Three men were electrocuted in Karnataka’s Gadag district early on Monday when they were installing a flex to celebrate Kannada film actor Yash’s birthday.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am