ಬ್ರೇಕಿಂಗ್ ನ್ಯೂಸ್
08-01-24 10:21 pm Bangalore Correspondent ಕರ್ನಾಟಕ
ಬೆಂಗಳೂರು, ಜ 08: ಸಿನಿಮಾ ಸಕ್ಸಸ್ ಪಾರ್ಟಿಯನ್ನು ಅವಧಿ ಮೀರಿ ಬೆಳಗಿನ ಜಾವದವರೆಗೆ ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 8 ಮಂದಿಗೆ ಹಾಗೂ ಕರ್ತವ್ಯಲೋಪವೆಸಗಿದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದೆ.
ಈ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿರುವ ಪ್ರತಿಯನ್ನು ತೋರಿಸಿದರು. ಅಲ್ಲದೆ ಚಿತ್ರತಂಡಕ್ಕೆ ನೀಡಿರುವ ನೊಟೀಸ್ ಮತ್ತು ಅದರ ಬಗ್ಗೆ ತನಿಖೆ ನಡೆಸುವಂತೆ ಮಲ್ಲೇಶ್ವರಂ ಎಸಿಪಿಗೆ ಸೂಚಿಸಲಾಗಿದೆ ಎಂದರು. ಜನವರಿ 3ರಂದು ರಾತ್ರಿಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಸುಬ್ರಹ್ಮಣ್ಯ ನಗರ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಮತ್ತು ನಾಲ್ವರು ಕಾನ್ ಸ್ಟೇಬಲ್ ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.


ಎಫ್ಐಆರ್ ನಲ್ಲಿರುವುದೇನು?:
ಅಬಕಾರಿ ಕಾಯಿದೆ ಷರತ್ತುಗಳ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮಾತ್ರ ರೆಸ್ಟೋಬಾರ್ ತೆರೆಯಲು ಅವಕಾಶವಿದೆ.
ಆದರೆ ಜಟ್ಲಾಗ್ ರೆಸ್ಟೋಬಾರ್ ಈ ನಿಮಯಮ ಉಲ್ಲಂಘಿಸಿ ಬೆಳಗಿನ ಜಾವ 3.30ರವರೆಗೂ ಪಾರ್ಟಿ ಮಾಡಲು ಸೆಲೆಬ್ರಿಟಿಗಳಿಗೆ ಅವಕಾಶ ಕೊಟ್ಟಿತ್ತು. ರೆಸ್ಟೋಬಾರ್ ಬೆಳಗ್ಗಿನ ಜಾವ 3 ಗಂಟೆಯಾದರೂ ತೆಗೆದೇ ಇದ್ದ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ನಗರ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಜಟ್ಲಾಗ್ ರೆಸ್ಟೋಬಾರ್ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕೂಡಲೇ ಬಾರ್ ಕ್ಲೋಸ್ ಮಾಡಿಸಿ 3.30ರ ಸುಮಾರಿಗೆ ಜೆಟ್ಲಾಗ್ ನಲ್ಲಿ ಪಾರ್ಟಿ ಮಾಡ್ತಿದ್ದ ಸೆಲೆಬ್ರಿಟಿಗಳನ್ನು ಮನೆಗೆ ಕಳುಹಿಸಿದ್ದರು.
ಜನವರಿ 4ರ ಬೆಳಗಿನ ಜಾವದವರೆಗೆ ಪಾರ್ಟಿ ಹೇಗೆ ನಡೆಯಿತು ಎಂಬುದರ ಕುರಿತು ವಿವರಗಳನ್ನು ಒದಗಿಸುವಂತೆ ಪೊಲೀಸರನ್ನು ಕೇಳಲಾಗಿದೆ.
ಜೆಟ್ ಲ್ಯಾಗ್ ಪಬ್ಗೆ ಏಕೆ ತಡವಾಗಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಯಿತು ಎಂದು ವಿವರಣೆ ನೀಡುವಂತೆ ಸೂಚಿಸಲಾಗಿದೆ ಎಂದು ಡಿಸಿಪಿ ಸೈದುಲ್ ಅದಾವತ್ ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ವಿವರಣೆ ನೀಡುವಂತೆ ಪೊಲೀಸರನ್ನೂ ಕೇಳಲಾಗಿದೆ. ಇತ್ತೀಚೆಗೆ ತೆರೆಕಂಡ ಕನ್ನಡದ ಸೂಪರ್ಹಿಟ್ ಸಿನಿಮಾ ‘ಕಾಟೇರ’ ತಂಡ ಈ ಸಕ್ಸಸ್ ಪಾರ್ಟಿ ಆಯೋಜಿಸಿತ್ತು.
ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟರಾದ ನಿನಾಸಂ ಸತೀಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಹಾಗೂ ಚಿಕ್ಕಣ್ಣ ಅವರಿಗೆ ಪ್ರಧಾನವಾಗಿ ನೋಟಿಸ್ ಜಾರಿ ಮಾಡಲಾಗಿದೆ.
FIR Against Kannada Actor Darshan, 8 Others For Partying Late At Jetlag Pub and bar In Bengaluru, Subramanya Nagar Police in trouble for allowing permission till morning 3:30. DCP Saidulu Adavath has ordered enquiry against Subramanya Nagar station inspector and others.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm