ಬ್ರೇಕಿಂಗ್ ನ್ಯೂಸ್
08-01-24 10:21 pm Bangalore Correspondent ಕರ್ನಾಟಕ
ಬೆಂಗಳೂರು, ಜ 08: ಸಿನಿಮಾ ಸಕ್ಸಸ್ ಪಾರ್ಟಿಯನ್ನು ಅವಧಿ ಮೀರಿ ಬೆಳಗಿನ ಜಾವದವರೆಗೆ ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 8 ಮಂದಿಗೆ ಹಾಗೂ ಕರ್ತವ್ಯಲೋಪವೆಸಗಿದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದೆ.
ಈ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿರುವ ಪ್ರತಿಯನ್ನು ತೋರಿಸಿದರು. ಅಲ್ಲದೆ ಚಿತ್ರತಂಡಕ್ಕೆ ನೀಡಿರುವ ನೊಟೀಸ್ ಮತ್ತು ಅದರ ಬಗ್ಗೆ ತನಿಖೆ ನಡೆಸುವಂತೆ ಮಲ್ಲೇಶ್ವರಂ ಎಸಿಪಿಗೆ ಸೂಚಿಸಲಾಗಿದೆ ಎಂದರು. ಜನವರಿ 3ರಂದು ರಾತ್ರಿಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಸುಬ್ರಹ್ಮಣ್ಯ ನಗರ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಮತ್ತು ನಾಲ್ವರು ಕಾನ್ ಸ್ಟೇಬಲ್ ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.


ಎಫ್ಐಆರ್ ನಲ್ಲಿರುವುದೇನು?:
ಅಬಕಾರಿ ಕಾಯಿದೆ ಷರತ್ತುಗಳ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮಾತ್ರ ರೆಸ್ಟೋಬಾರ್ ತೆರೆಯಲು ಅವಕಾಶವಿದೆ.
ಆದರೆ ಜಟ್ಲಾಗ್ ರೆಸ್ಟೋಬಾರ್ ಈ ನಿಮಯಮ ಉಲ್ಲಂಘಿಸಿ ಬೆಳಗಿನ ಜಾವ 3.30ರವರೆಗೂ ಪಾರ್ಟಿ ಮಾಡಲು ಸೆಲೆಬ್ರಿಟಿಗಳಿಗೆ ಅವಕಾಶ ಕೊಟ್ಟಿತ್ತು. ರೆಸ್ಟೋಬಾರ್ ಬೆಳಗ್ಗಿನ ಜಾವ 3 ಗಂಟೆಯಾದರೂ ತೆಗೆದೇ ಇದ್ದ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ನಗರ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಜಟ್ಲಾಗ್ ರೆಸ್ಟೋಬಾರ್ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕೂಡಲೇ ಬಾರ್ ಕ್ಲೋಸ್ ಮಾಡಿಸಿ 3.30ರ ಸುಮಾರಿಗೆ ಜೆಟ್ಲಾಗ್ ನಲ್ಲಿ ಪಾರ್ಟಿ ಮಾಡ್ತಿದ್ದ ಸೆಲೆಬ್ರಿಟಿಗಳನ್ನು ಮನೆಗೆ ಕಳುಹಿಸಿದ್ದರು.
ಜನವರಿ 4ರ ಬೆಳಗಿನ ಜಾವದವರೆಗೆ ಪಾರ್ಟಿ ಹೇಗೆ ನಡೆಯಿತು ಎಂಬುದರ ಕುರಿತು ವಿವರಗಳನ್ನು ಒದಗಿಸುವಂತೆ ಪೊಲೀಸರನ್ನು ಕೇಳಲಾಗಿದೆ.
ಜೆಟ್ ಲ್ಯಾಗ್ ಪಬ್ಗೆ ಏಕೆ ತಡವಾಗಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಯಿತು ಎಂದು ವಿವರಣೆ ನೀಡುವಂತೆ ಸೂಚಿಸಲಾಗಿದೆ ಎಂದು ಡಿಸಿಪಿ ಸೈದುಲ್ ಅದಾವತ್ ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ವಿವರಣೆ ನೀಡುವಂತೆ ಪೊಲೀಸರನ್ನೂ ಕೇಳಲಾಗಿದೆ. ಇತ್ತೀಚೆಗೆ ತೆರೆಕಂಡ ಕನ್ನಡದ ಸೂಪರ್ಹಿಟ್ ಸಿನಿಮಾ ‘ಕಾಟೇರ’ ತಂಡ ಈ ಸಕ್ಸಸ್ ಪಾರ್ಟಿ ಆಯೋಜಿಸಿತ್ತು.
ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟರಾದ ನಿನಾಸಂ ಸತೀಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಹಾಗೂ ಚಿಕ್ಕಣ್ಣ ಅವರಿಗೆ ಪ್ರಧಾನವಾಗಿ ನೋಟಿಸ್ ಜಾರಿ ಮಾಡಲಾಗಿದೆ.
FIR Against Kannada Actor Darshan, 8 Others For Partying Late At Jetlag Pub and bar In Bengaluru, Subramanya Nagar Police in trouble for allowing permission till morning 3:30. DCP Saidulu Adavath has ordered enquiry against Subramanya Nagar station inspector and others.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm