ಬ್ರೇಕಿಂಗ್ ನ್ಯೂಸ್
09-01-24 01:54 pm Bangalore Correspondent ಕರ್ನಾಟಕ
ಬೆಂಗಳೂರು, ಜ 09: ಕನ್ನಡ ನಾಮಫಲಕ ಅಳವಡಿಕೆ ವಿಚಾರದಲ್ಲಿ ನಡೆಸಲಾದ ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿತರಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಅವರನ್ನ ಸೋಮವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಆದರೆ, ಬಿಡುಗಡೆಯಾಗುತ್ತಿದ್ದಂತೆಯೇ ಪೊಲೀಸರು ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧಿಸಿದ್ದು, ಇನ್ನೊಮ್ಮೆ ಕೋರ್ಟ್ ಮುಂದೆ ಹಾಜರುಪಡಿಸಿ ಜೈಲಿಗಟ್ಟಲು ಸಿದ್ಧತೆ ನಡೆಸುತ್ತಿದ್ದಾರೆ.
ಕರವೇ ನಾರಾಯಣ ಗೌಡ ಸೇರಿದಂತೆ ವೇದಿಕೆಯ 28 ಮಂದಿ ಕಾರ್ಯಕರ್ತರಿಗೆ ಕೋರ್ಟ್ ಕಳೆದ ಶುಕ್ರವಾರವೇ ಜಾಮೀನು ನೀಡಿತ್ತು. ಆದರೆ, ಜಾಮೀನು ಆದೇಶದ ಪ್ರತಿ ಸಿಕ್ಕಿಲ್ಲ ಎಂಬ ಕಾರಣ ನೀಡಿ ಶುಕ್ರವಾರ ರಾತ್ರಿವರೆಗೂ ಕಾಯಿಸಲಾಗಿತ್ತು. ಶನಿವಾರ -ಭಾನುವಾರ ರಜೆ ಇದ್ದ ಕಾರಣ ಬಿಡುಗಡೆ ಆಗಿರಲಿಲ್ಲ. ಸೋಮವಾರ ಕೂಡಾ ಕಾನೂನಾತ್ಮಕ ಪ್ರಕ್ರಿಯೆಗಳ ಹೆಸರಿನಲ್ಲಿ ದಿನ ದೂಡಿದ ಅಧಿಕಾರಿಗಳು ಮಂಗಳವಾರ ಬೆಳಗ್ಗೆಯಷ್ಟೇ ಬಿಡುಗಡೆ ಮಾಡಿದ್ದಾರೆ. ಆದರೆ, ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಯಾವುದದು ಇನ್ನೊಂದು ಪ್ರಕರಣ?
![]()
ನಾರಾಯಣ ಗೌಡ ಜೈಲಿನಿಂದ ಬಿಡುಗಡೆ ಆಗೋ ವೇಳೆ ಅಲ್ಲೇ ಕಾದು ಕೂತಿದ್ದ ಕುಮಾರಸ್ವಾಮಿ ಲೇಔಟ್ ಪೊಲೀಸರು ಮತ್ತೆ ಗೌಡ್ರನ್ನ ಬಂಧಿಸಿದ್ದಾರೆ. 2017ರ ಕನ್ನಡ ನಾಮಫಲಕ ಹೋರಾಟಕ್ಕೆ ಸಂಬಂಧಿಸಿ ಅವರ ಬಂಧನ ನಡೆದಿದೆ.
2017ರಲ್ಲಿ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್ ನಾಮ ಫಲಕಗಳಿಗೆ ಮಸಿ ಬಳಿಯಲು ಮುಂದಾಗಿದ್ದ ನಾರಾಯಣಗೌಡ ಹಾಗೂ ಸಂಗಡಿಗರು ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಮೇಲೆ ಚಾರ್ಜ್ ಶೀಟ್ ಕೂಡಾ ಸಲ್ಲಿಕೆಯಾಗಿತ್ತು. ಆದರೆ ನಾರಾಯಣ ಗೌಡರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿರಲಿಲ್ಲ. ಇದಕ್ಕೆ ಸಂಬಂಧಿಸಿ 16 ಬಾರಿ ಜಾಮೀನುರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಈ ನಡುವೆ, ಜನವರಿ 12ರೊಳಗೆ ನಾರಾಯಣ ಗೌಡರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡ 27 ಕನ್ನಡ ಕಾರ್ಯಕರ್ತರನ್ನು ಪೊಲೀಸರ ಬೆಂಗಾವಲಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಅವರವರ ಮನೆಗೆ ಬಿಡುವ ಕೆಲಸ ನಡೆಯುತ್ತಿದೆ. ಈ ನಡುವೆ, ಮರಳಿ ಬಂಧಿತರಾದ ನಾರಾಯಣ ಗೌಡ ಅವರನ್ನು ಸೈಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಾರಾಯಣಗೌಡ ಪುತ್ರಿ ಹಾಗೂ ಪುತ್ರ ಆಸ್ಪತ್ರೆ ಬಳಿ ಆಗಮಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮುಗಿದ ಬಳಿಕ ಪೊಲೀಸರು ಅವರನ್ನು ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.
ನಾರಾಯಣ ಗೌಡರ ಮೇಲಿರುವುದು ವಿಚಾರಣೆಗೆ ಹಾಜರಾಗದ ಕಾರಣಕ್ಕಾಗಿ ಹೊರಡಿಸಿದ ಬಂಧನ ಆದೇಶ. ಈಗ ಅವರನ್ನು ಹಾಜರು ಮಾಡುವಲ್ಲಿಗೆ ಬಂಧನ ವಾರಂಟ್ ರದ್ದಾಗುವ ಸಾಧ್ಯತೆ ಇದೆ. ಅಥವಾ ಒಂದೊಮ್ಮೆ ಕೋರ್ಟ್ ಬಯಸಿದರೆ ನ್ಯಾಯಾಂಗ ಬಂಧನವನ್ನು ವಿಧಿಸುವ ಸಾಧ್ಯತೆಗಳೂ ಇವೆ.
Karnataka Rakshana Vedike Narayana Gowda arrested again after release from jail in old case. Vedike Narayana Gowda who was released on bail was once again arrested by the Kumaraswamy Layout Police Station in connection to 2017 case.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm