ಬ್ರೇಕಿಂಗ್ ನ್ಯೂಸ್
10-01-24 04:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸಬೇಕೆಂಬ ವಿಚಾರದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ನಾಯಕರು ತಮ್ಮ ಪಟ್ಟು ಸಡಿಲಿಸಿದಂತೆ ಕಾಣುತ್ತಿಲ್ಲ. ದೆಹಲಿ ಹಾಗೂ ರಾಜ್ಯ ಮಟ್ಟದಲ್ಲಿ ಈ ವಿಷಯದಲ್ಲಿ ಸಾಕಷ್ಟು ಒತ್ತಡ ಹೇರುತ್ತಿರುವ ಸಚಿವ ಜಾರಕಿಹೊಳಿ ಅವರು ಲೋಕಸಭಾ ಚುನಾವಣೆ ದೃಷ್ಟಿಯಿಂದ ಲಿಂಗಾಯತರು, ಪ.ಜಾತಿ ಹಾಗೂ ಪಂಗಡದವರಿಗೆ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕೆಂದು ಪ್ರತಿಪಾದಿಸುತ್ತ ಬಂದಿದ್ದಾರೆ.
ಸೋಮವಾರ ರಾತ್ರಿ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಜಾತಿ ಪ್ರಾತಿನಿಧ್ಯ ನೀಡುವ ಅಗತ್ಯವನ್ನು ಮನದಟ್ಟು ಮಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, “ನಮ್ಮ ವಿಚಾರಗಳನ್ನು ಪ್ರಧಾನ ಕಾರ್ಯದರ್ಶಿಗಳಿಗೆ ಹೇಳಿದ್ದೇವೆ. ಬುಧವಾರ ಬೆಂಗಳೂರಿನಲ್ಲಿ ಸಭೆ ಇದೆ. ಜ.11ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಸುರ್ಜೇವಾಲ ಭೇಟಿ ವೇಳೆಯೂ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪಿಸಿದ್ದೇವೆ. ಪ್ರಬಲ ಜಾತಿಗಳಿಗೆ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.
ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಲವು ಹಿರಿಯ ಸಚಿವರಿಗೆ ಫೋನ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಸಚಿವರಾದ ಡಾ.ಪರಮೇಶ್ವರ್, ದಿನೇಶ್ ಗುಂಡೂರಾವ್, ಕೆ.ಎಚ್.ಮುನಿಯಪ್ಪ, ಕೆ.ಎನ್. ರಾಜಣ್ಣ ಅವರಿಗೆ ದೂರವಾಣಿ ಕರಡ ಮಾಡಿ, ಡಿಸಿಎಂ ವಿಚಾರವನ್ನು ಪದೇ ಪದೆ ಪ್ರಸ್ತಾಪಿಸಬೇಡಿ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ರೀತಿಯ ಗೊಂದಲ ಎಬ್ಬಿಸಬಾರದು. ಆಗಾಗ್ಗೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಗೊಂದಲ ಸೃಷ್ಟಿಸುವುದು ಸರಿ ಅಲ್ಲ. ಸರ್ಕಾರ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಅವುಗಳನ್ನು ಮುಂದಿಟ್ಟು ಜನರ ಮನ ಗೆಲ್ಲಬೇಕು ಎಂದು ವೇಣುಗೋಪಾಲ್ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
Some leaders, including PwD Minister Satish Jarkiholi, do not seem to have relented on the issue of creating three deputy chief ministers' posts in the state government ahead of the Lok Sabha elections. Jarkiholi, who has been putting a lot of pressure on the issue at the Delhi and state levels, has been advocating the creation of three deputy CM posts for Lingayats, SCs and STs in view of the Lok Sabha elections.
21-02-25 10:47 pm
Bangalore Correspondent
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
Siddaramaiah, MUDA case, Vijayendra: ಮುಡಾ ಹಗರ...
20-02-25 10:06 pm
22-02-25 09:48 pm
HK News Desk
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
Kasargod News, Crime: ಉಕ್ಕಿನಡ್ಕ ; ಕೆರೆಗೆ ಬಿದ್...
22-02-25 01:31 pm
Donald Trump, Modi, India: ಭಾರತದಲ್ಲಿ ಮೋದಿಯನ್ನ...
21-02-25 01:23 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm