ಬ್ರೇಕಿಂಗ್ ನ್ಯೂಸ್
10-01-24 04:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸಬೇಕೆಂಬ ವಿಚಾರದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ನಾಯಕರು ತಮ್ಮ ಪಟ್ಟು ಸಡಿಲಿಸಿದಂತೆ ಕಾಣುತ್ತಿಲ್ಲ. ದೆಹಲಿ ಹಾಗೂ ರಾಜ್ಯ ಮಟ್ಟದಲ್ಲಿ ಈ ವಿಷಯದಲ್ಲಿ ಸಾಕಷ್ಟು ಒತ್ತಡ ಹೇರುತ್ತಿರುವ ಸಚಿವ ಜಾರಕಿಹೊಳಿ ಅವರು ಲೋಕಸಭಾ ಚುನಾವಣೆ ದೃಷ್ಟಿಯಿಂದ ಲಿಂಗಾಯತರು, ಪ.ಜಾತಿ ಹಾಗೂ ಪಂಗಡದವರಿಗೆ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕೆಂದು ಪ್ರತಿಪಾದಿಸುತ್ತ ಬಂದಿದ್ದಾರೆ.
ಸೋಮವಾರ ರಾತ್ರಿ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಜಾತಿ ಪ್ರಾತಿನಿಧ್ಯ ನೀಡುವ ಅಗತ್ಯವನ್ನು ಮನದಟ್ಟು ಮಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, “ನಮ್ಮ ವಿಚಾರಗಳನ್ನು ಪ್ರಧಾನ ಕಾರ್ಯದರ್ಶಿಗಳಿಗೆ ಹೇಳಿದ್ದೇವೆ. ಬುಧವಾರ ಬೆಂಗಳೂರಿನಲ್ಲಿ ಸಭೆ ಇದೆ. ಜ.11ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಸುರ್ಜೇವಾಲ ಭೇಟಿ ವೇಳೆಯೂ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪಿಸಿದ್ದೇವೆ. ಪ್ರಬಲ ಜಾತಿಗಳಿಗೆ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.

ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಲವು ಹಿರಿಯ ಸಚಿವರಿಗೆ ಫೋನ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಸಚಿವರಾದ ಡಾ.ಪರಮೇಶ್ವರ್, ದಿನೇಶ್ ಗುಂಡೂರಾವ್, ಕೆ.ಎಚ್.ಮುನಿಯಪ್ಪ, ಕೆ.ಎನ್. ರಾಜಣ್ಣ ಅವರಿಗೆ ದೂರವಾಣಿ ಕರಡ ಮಾಡಿ, ಡಿಸಿಎಂ ವಿಚಾರವನ್ನು ಪದೇ ಪದೆ ಪ್ರಸ್ತಾಪಿಸಬೇಡಿ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ರೀತಿಯ ಗೊಂದಲ ಎಬ್ಬಿಸಬಾರದು. ಆಗಾಗ್ಗೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಗೊಂದಲ ಸೃಷ್ಟಿಸುವುದು ಸರಿ ಅಲ್ಲ. ಸರ್ಕಾರ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಅವುಗಳನ್ನು ಮುಂದಿಟ್ಟು ಜನರ ಮನ ಗೆಲ್ಲಬೇಕು ಎಂದು ವೇಣುಗೋಪಾಲ್ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
Some leaders, including PwD Minister Satish Jarkiholi, do not seem to have relented on the issue of creating three deputy chief ministers' posts in the state government ahead of the Lok Sabha elections. Jarkiholi, who has been putting a lot of pressure on the issue at the Delhi and state levels, has been advocating the creation of three deputy CM posts for Lingayats, SCs and STs in view of the Lok Sabha elections.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm