ಬ್ರೇಕಿಂಗ್ ನ್ಯೂಸ್
10-01-24 04:41 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದರೆ, ಇತ್ತ ಕರ್ನಾಟಕದ ಮುಜರಾಯಿ ಇಲಾಖೆ ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ವಸತಿ ವ್ಯವಸ್ಥೆ ಮಾಡಲು ಮುಂದಾಗಿದೆ. ಇನ್ನೇನು ಕೆಲ ದಿನಗಳಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದಕ್ಕೂ ಮೊದಲೇ ಉತ್ತರಪ್ರದೇಶ ಸರ್ಕಾರಕ್ಕೆ ಕರ್ನಾಟಕದಿಂದ ಪತ್ರ ಬರೆದಿದ್ದು ವಸತಿ ನಿವಾಸಕ್ಕೆ ಮನವಿ ಮಾಡಿದೆ.
ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯ್ಯೋಧ್ಯೆಗೆ ಬರುತ್ತಾರೆ. ಅವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ರಾಜ್ಯ ಮುಜರಾಯಿ ಇಲಾಖೆಯಿಂದ ಪತ್ರದ ಮೂಲಕ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದೆ.
ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದಕ್ಕೂ ಹಿಂದೆ, 2020ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಆಗಿನ ಸಿಎಂ ಯಡಿಯೂರಪ್ಪ ಕೂಡ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿತ್ತು.
ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರದ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿಯನ್ನ ರಾಜ್ಯದ ಮುಜರಾಯಿ ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಮುಂದಾಗಿದೆ. ಎರಡು ದಿನಗಳ ಹಿಂದೆ ರಾಜ್ಯದ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುವ ಜ 22ರಂದು ವಿಶೇಷ ಪೂಜೆ ನಡೆಸಲು ಸುತ್ತೋಲೆ ಕಳುಹಿಸಿತ್ತು. ಬಿಜೆಪಿ ಮತ್ತು ಸಂಘ ಪರಿವಾರ ರಾಮ ಮಂದಿರದ ವಿಚಾರದಲ್ಲಿ ಪ್ರಚಾರ ಪಡೆಯುತ್ತಿರುವಾಗಲೇ ಕಾಂಗ್ರೆಸ್ ಸರ್ಕಾರವೂ ಪೂರಕವಾಗಿ ಕ್ರಮಕ್ಕೆ ಮುಂದಾಗಿದೆ.
The whole nation is waiting for Ram Mandir (Ayodhya Ram Mandir) in Ramnoor. Those moments are just a few days away. On this occasion, the Karnataka Religious Endowment Department has come forward to give a good news to the people.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am