ಬ್ರೇಕಿಂಗ್ ನ್ಯೂಸ್
12-01-24 02:14 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ.12: ಶ್ರೀರಾಮಚಂದ್ರ ಎಲ್ಲರಿಗೂ ದೇವರು. ಕಾಂಗ್ರೆಸಿನಲ್ಲೂ ಬಹಳಷ್ಟು ಮಂದಿ ರಾಮನ ಭಕ್ತರಿದ್ದಾರೆ. ರಾಮನ ವಿಚಾರದಲ್ಲಿ ರಾಜಕೀಯ ಮಾಡಲು ರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರದ ಬಗ್ಗೆ ಸುದ್ದಿಗಾರರ ಜೊತೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾವೂ ಹಿಂದುಗಳೇ, ನಾನೂ ಕೂಡ ಶ್ರೀರಾಮನ ಭಕ್ತ.
![]()
ನಮಗೂ ಶ್ರೀ ರಾಮಚಂದ್ರ ಆರಾಧ್ಯ ದೇವರೇ. ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ಕಾಂಗ್ರೆಸ್ನಲ್ಲೂ ಶ್ರೀರಾಮನ ಭಕ್ತರಿದ್ದಾರೆ. ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ ಎಂದು ಹೇಳಿದರು.
ನಾವೂ ಶ್ರೀರಾಮನನ್ನು ಆರಾಧಿಸುತ್ತೇವೆ ಎಂದ ಪ್ರದೀಪ್ ಈಶ್ವರ್, ಅಷ್ಟೇ ಅಲ್ಲ ಅಲ್ಲಾಹ್, ಏಸುವನ್ನು ಗೌರವಿಸುತ್ತೇವೆ. ಬಿಜೆಪಿಯವರ ತರಹ ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ ತರುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತಾಡ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದರು.
ಲೋಕಸಭೆಯ ಪ್ರವೇಶಕ್ಕೆ ಪಾಸ್ ಕೊಟ್ಟ ಪ್ರತಾಪ್ ಸಿಂಹ ದೇಶದ್ರೋಹಿ ಅಲ್ವಾ ಎಂದು ಪ್ರಶ್ನಿಸಿದ ಶಾಸಕ ಪ್ರದೀಪ್ ಈಶ್ವರ್, ಒಂದು ವೇಳೆ ನಾವು ಪಾಸ್ ಕೊಟ್ಟಿದ್ರೆ ಏನ್ ಪಟ್ಟ ಕಟ್ಟುತ್ತಿದ್ರಿ ಎಂದು ಪ್ರಶ್ನಿಸಿದರು. ಇನ್ನು, ಕೇಂದ್ರ ಸರ್ಕಾರ ನಮ್ಮ ಪಾಲಿನ ಅಕ್ಕಿ ಕೊಡ್ತಿದ್ದಾರೆಯೇ ಹೊರತು, ಅವರ ಮನೆಯಿಂದ ತಂದು ಕೊಡ್ತಿಲ್ಲ ಎಂದರು.
MLA Pradeep Eshwar questions asking is Rama BJPs asset.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am