ಬ್ರೇಕಿಂಗ್ ನ್ಯೂಸ್
20-11-20 04:34 pm Headline Karnataka News Network ಕರ್ನಾಟಕ
ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm