ಬ್ರೇಕಿಂಗ್ ನ್ಯೂಸ್
20-11-20 04:34 pm Headline Karnataka News Network ಕರ್ನಾಟಕ
ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm