ಬ್ರೇಕಿಂಗ್ ನ್ಯೂಸ್
20-11-20 04:34 pm Headline Karnataka News Network ಕರ್ನಾಟಕ
ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm