ಬ್ರೇಕಿಂಗ್ ನ್ಯೂಸ್
13-01-24 07:02 pm HK News Desk ಕರ್ನಾಟಕ
ಕಾರವಾರ, ಜ.13: ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೇಕಾದರೆ ಬೆದರಿಕೆ ಅಂತ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮದಂತೆ ಮಾಡುವುದು ಗ್ಯಾರಂಟಿಯೇ. ಇದು ಹಿಂದೂ ಸಮಾಜದ ತೀರ್ಮಾನ ಎಂದು ಸಂಸದ ಅನಂತ ಕುಮಾರ್ ಹೆಗಡೆ ವೀರಾವೇಶದ ಮಾತುಗಳನ್ನಾಡಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಿದ್ದೆಯಿಂದ ಎದ್ದು ಕುಳಿತಂತೆ ವರ್ತಿಸುತ್ತಿರುವ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡತೊಡಗಿದ್ದಾರೆ. ಕುಮಟಾದಲ್ಲಿ ರಾಮಮಂದಿರ ಆಮಂತ್ರಣ ಕುರಿತ ಕಾರ್ಯಕ್ರಮದಲ್ಲಿ ಅನಂತ ಹೆಗಡೆ ಭಾಷಣ ಮಾಡಿದ್ದು ಶಿರಸಿಯ ಸಿಪಿ ಬಜಾರ್ದಲ್ಲಿರುವ ಮಸೀದಿ ಇರುವುದು ಅದು ವಿಜಯ ವಿಠ್ಠಲ ದೇವಸ್ಥಾನ. ಶ್ರೀರಂಗ ಪಟ್ಟಣದಲ್ಲಿರುವ ದೊಡ್ಡ ಮಸೀದಿ ಅದು ಮಾರುತಿ ದೇವಸ್ಥಾನ. ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದು ಸಮಾಜ ಮತ್ತೆ ವಾಪಾಸ್ ಕೂತುಕೊಳ್ಳೋದಿಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ.

ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ ಎಂದು ಹೇಳಿದ ಅವರು, ನಮ್ಮ ವಿರೋಧಿ ಕಾಂಗ್ರೆಸ್ ಅಲ್ಲ. ಅಲ್ಲಿರುವ ಕೆಲವರ ಮಾನಸೀಕತೆ ಅಷ್ಟೇ. ಮುರುಕುರಾಮಯ್ಯನಂತಹ ಮಾನಸಿಕತೆಯೇ ನಮ್ಮ ವಿರೋಧಿ. ಗತಿಕೆಟ್ಟ ಹರಾಜಾಗಿ ಹೋದಂತಹ, ಅಲ್ಪಸಂಖ್ಯಾತ ಓಟಿಗಾಗಿ ಓಲೈಸುವ ಮಾನಸಿಕತೆಗೆ ನಮ್ಮ ವಿರೋಧ. ರಾಮಜನ್ಮಭೂಮಿ ಆಮಂತ್ರಣ ಬಂದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಯನ್ನೇ ಅಣಕಿಸಿ ಮುಖ್ಯಮಂತ್ರಿಯ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ.
As the Babri Masjid is destroyed, bhatkal's golden palli will also join its ranks. Think of this as a threat. Is it a guarantee that the Babri Masjid will be demolished? Mp Anant Kumar Hegde said that this is the decision of the Hindu society.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm