ಬ್ರೇಕಿಂಗ್ ನ್ಯೂಸ್
13-01-24 07:02 pm HK News Desk ಕರ್ನಾಟಕ
ಕಾರವಾರ, ಜ.13: ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೇಕಾದರೆ ಬೆದರಿಕೆ ಅಂತ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮದಂತೆ ಮಾಡುವುದು ಗ್ಯಾರಂಟಿಯೇ. ಇದು ಹಿಂದೂ ಸಮಾಜದ ತೀರ್ಮಾನ ಎಂದು ಸಂಸದ ಅನಂತ ಕುಮಾರ್ ಹೆಗಡೆ ವೀರಾವೇಶದ ಮಾತುಗಳನ್ನಾಡಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಿದ್ದೆಯಿಂದ ಎದ್ದು ಕುಳಿತಂತೆ ವರ್ತಿಸುತ್ತಿರುವ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡತೊಡಗಿದ್ದಾರೆ. ಕುಮಟಾದಲ್ಲಿ ರಾಮಮಂದಿರ ಆಮಂತ್ರಣ ಕುರಿತ ಕಾರ್ಯಕ್ರಮದಲ್ಲಿ ಅನಂತ ಹೆಗಡೆ ಭಾಷಣ ಮಾಡಿದ್ದು ಶಿರಸಿಯ ಸಿಪಿ ಬಜಾರ್ದಲ್ಲಿರುವ ಮಸೀದಿ ಇರುವುದು ಅದು ವಿಜಯ ವಿಠ್ಠಲ ದೇವಸ್ಥಾನ. ಶ್ರೀರಂಗ ಪಟ್ಟಣದಲ್ಲಿರುವ ದೊಡ್ಡ ಮಸೀದಿ ಅದು ಮಾರುತಿ ದೇವಸ್ಥಾನ. ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದು ಸಮಾಜ ಮತ್ತೆ ವಾಪಾಸ್ ಕೂತುಕೊಳ್ಳೋದಿಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ.

ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ ಎಂದು ಹೇಳಿದ ಅವರು, ನಮ್ಮ ವಿರೋಧಿ ಕಾಂಗ್ರೆಸ್ ಅಲ್ಲ. ಅಲ್ಲಿರುವ ಕೆಲವರ ಮಾನಸೀಕತೆ ಅಷ್ಟೇ. ಮುರುಕುರಾಮಯ್ಯನಂತಹ ಮಾನಸಿಕತೆಯೇ ನಮ್ಮ ವಿರೋಧಿ. ಗತಿಕೆಟ್ಟ ಹರಾಜಾಗಿ ಹೋದಂತಹ, ಅಲ್ಪಸಂಖ್ಯಾತ ಓಟಿಗಾಗಿ ಓಲೈಸುವ ಮಾನಸಿಕತೆಗೆ ನಮ್ಮ ವಿರೋಧ. ರಾಮಜನ್ಮಭೂಮಿ ಆಮಂತ್ರಣ ಬಂದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಯನ್ನೇ ಅಣಕಿಸಿ ಮುಖ್ಯಮಂತ್ರಿಯ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ.
As the Babri Masjid is destroyed, bhatkal's golden palli will also join its ranks. Think of this as a threat. Is it a guarantee that the Babri Masjid will be demolished? Mp Anant Kumar Hegde said that this is the decision of the Hindu society.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm