ಬ್ರೇಕಿಂಗ್ ನ್ಯೂಸ್
14-01-24 01:47 pm HK News Desk ಕರ್ನಾಟಕ
ಕಾರವಾರ, ಜ 13: ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕುಮುಟಾದಲ್ಲಿ ಶನಿವಾರ ನಡೆದಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಹೆಗಡೆ, "ಅಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಗೋ ಹತ್ಯೆ ನಿಷೇಧದ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಈ ಆಂದೋಲನದಲ್ಲಿ ಗೋಲಿಬಾರ್ ನಡೆದು ಹತ್ತಾರು ಸಂತರು ಸತ್ತರು. ಇಂದಿರಾ ಗಾಂಧಿ ಸಮ್ಮುಖದಲ್ಲಿ ಈ ಹತ್ಯೆ ನಡೆಯಿತು" ಎಂದು ಆರೋಪಿಸಿದ್ದರು.
ಕೆಲವರು ಜಾತಿ, ಭಾಷೆ, ಪ್ರಾದೇಶಿಕತೆ ಹಾಗು ಇತರ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಈಗಲೂ ಅದೇ ಕೆಲಸ ನಡೆಯುತ್ತಿದೆ. ಆದರೂ ಕೂಡ ಸಮಾಜ ಒಟ್ಟಿಗೆ ನಿಂತಿದೆ. ಹೀಗಾಗಿ ಈಗಿನ ಗೆಲುವನ್ನು ಮುಂದಿನ ಶತಮಾನದಲ್ಲೂ ನೆನೆಯುವಂತಿರಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿರುವಂತೆ ಈ ಬಾರಿಯ ಗೆಲುವು ಮುಂದಿನ ದಿನಗಳಲ್ಲಿ ಅಳಿಸಲು ನಮ್ಮಿಂದಲೂ ಆಗಬಾರದು. ಗೆಲುವಿನ ಹೊಡೆತ ನಮ್ಮ ವಿರೋಧಿಗಳಿಗೆ ಆಗಬೇಕು. ನಮ್ಮ ವಿರೋಧ ಕಾಂಗ್ರೆಸ್ ಅಲ್ಲ. ಆದರೆ, ನಮ್ಮ ವಿರೋಧಿ ಸಿದ್ದರಾಮಯ್ಯ" ಎಂದು ವಾಗ್ದಾಳಿ ನಡೆಸಿದ್ದರು.
ಸಿಎಂ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, "ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವೇ'' ಎಂದು ಬರೆದಿದ್ದಾರೆ
A suo motu case has been registered against BJP MP Anant Kumar Hegde at Kumta police station on charges of making inflammatory remarks and making hate speeches. An FIR has been registered under IPC sections 505 and 153A.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm