ಬ್ರೇಕಿಂಗ್ ನ್ಯೂಸ್
14-01-24 01:47 pm HK News Desk ಕರ್ನಾಟಕ
ಕಾರವಾರ, ಜ 13: ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕುಮುಟಾದಲ್ಲಿ ಶನಿವಾರ ನಡೆದಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಹೆಗಡೆ, "ಅಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಗೋ ಹತ್ಯೆ ನಿಷೇಧದ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಈ ಆಂದೋಲನದಲ್ಲಿ ಗೋಲಿಬಾರ್ ನಡೆದು ಹತ್ತಾರು ಸಂತರು ಸತ್ತರು. ಇಂದಿರಾ ಗಾಂಧಿ ಸಮ್ಮುಖದಲ್ಲಿ ಈ ಹತ್ಯೆ ನಡೆಯಿತು" ಎಂದು ಆರೋಪಿಸಿದ್ದರು.
ಕೆಲವರು ಜಾತಿ, ಭಾಷೆ, ಪ್ರಾದೇಶಿಕತೆ ಹಾಗು ಇತರ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಈಗಲೂ ಅದೇ ಕೆಲಸ ನಡೆಯುತ್ತಿದೆ. ಆದರೂ ಕೂಡ ಸಮಾಜ ಒಟ್ಟಿಗೆ ನಿಂತಿದೆ. ಹೀಗಾಗಿ ಈಗಿನ ಗೆಲುವನ್ನು ಮುಂದಿನ ಶತಮಾನದಲ್ಲೂ ನೆನೆಯುವಂತಿರಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿರುವಂತೆ ಈ ಬಾರಿಯ ಗೆಲುವು ಮುಂದಿನ ದಿನಗಳಲ್ಲಿ ಅಳಿಸಲು ನಮ್ಮಿಂದಲೂ ಆಗಬಾರದು. ಗೆಲುವಿನ ಹೊಡೆತ ನಮ್ಮ ವಿರೋಧಿಗಳಿಗೆ ಆಗಬೇಕು. ನಮ್ಮ ವಿರೋಧ ಕಾಂಗ್ರೆಸ್ ಅಲ್ಲ. ಆದರೆ, ನಮ್ಮ ವಿರೋಧಿ ಸಿದ್ದರಾಮಯ್ಯ" ಎಂದು ವಾಗ್ದಾಳಿ ನಡೆಸಿದ್ದರು.
ಸಿಎಂ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, "ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವೇ'' ಎಂದು ಬರೆದಿದ್ದಾರೆ
A suo motu case has been registered against BJP MP Anant Kumar Hegde at Kumta police station on charges of making inflammatory remarks and making hate speeches. An FIR has been registered under IPC sections 505 and 153A.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm