Priyanka Gandhi, Koppal: ಕೊಪ್ಪಳ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧೆ ಸಾಧ್ಯತೆ ; ಕಾಂಗ್ರೆಸ್ ಗುಪ್ತ ಸಮೀಕ್ಷೆಯಲ್ಲಿ ಪ್ಲಸ್ ಮೈನಸ್ ಲೆಕ್ಕಾಚಾರ 

14-01-24 05:27 pm       Bangalore Correspondent   ಕರ್ನಾಟಕ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಬೆಂಗಳೂರು, ಜ.14: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. 

ಎಐಸಿಸಿ ವತಿಯಿಂದ ಕರ್ನಾಟಕದ ಕೊಪ್ಪಳ ಕ್ಷೇತ್ರದಲ್ಲಿ ಈಗಾಗಲೇ ಸಮೀಕ್ಷೆ ನಡೆಸಿದ್ದು ಆ ಕ್ಷೇತ್ರವನ್ನೇ ಸ್ಪರ್ಧೆಗೆ ಆಯ್ದುಕೊಳ್ಳಲು ಮುಂದಾಗಿದೆ. ತೆಲಂಗಾಣದ ಮತ್ತೊಂದು ಸ್ಥಾನದಿಂದಲೂ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಯೋಚಿಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೊಪ್ಪಳ ಕರ್ನಾಟಕದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದ್ದು, 8 ವಿಧಾನಸಭೆ ಕ್ಷೇತ್ರಗಳ ಪೈಕಿ 6 ಕಾಂಗ್ರೆಸ್‌ ತೆಕ್ಕೆಯಲ್ಲಿವೆ. ಎಐಸಿಸಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಪ್ರಿಯಾಂಕಾ ಗಾಂಧಿಗೆ ಇದೇ ಕ್ಷೇತ್ರ ಸುರಕ್ಷಿತ ಎಂದು ಸೂಚಿಸಿದೆ. ಪ್ರಸ್ತುತ ಕೊಪ್ಪಳ ಕ್ಷೇತ್ರವನ್ನು ಬಿಜೆಪಿಯ ಕರಡಿ ಸಂಗಣ್ಣ ಪ್ರತಿನಿಧಿಸುತ್ತಿದ್ದಾರೆ. 

ಈ ಹಿಂದೆ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 1978 ರಲ್ಲಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ನಂತರ ರಾಜಕೀಯ ಪುನರ್ಜನ್ಮ ಪಡೆದಿದ್ದರು. ಸೊಸೆ ಸೋನಿಯಾ ಗಾಂಧಿ 1999 ರಲ್ಲಿ ಕರ್ನಾಟಕದ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಅವರೆದುರು ದಿವಂಗತ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಸ್ಪರ್ಧಿಸಿದ್ದು ಹೈವೋಲ್ಟೇಜ್ ಚುನಾವಣೆಯಾಗಿ ಪರಿಗಣಿಸಲ್ಪಟ್ಟಿತ್ತು. ಪ್ರಿಯಾಂಕಾ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಿದರೆ, ಅದು ಕಾಂಗ್ರೆಸ್‌ಗೆ ರಾಜ್ಯಾದ್ಯಂತ ಸಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಬಿಜೆಪಿ ವಿರುದ್ಧ ಹೋರಾಡಲು ಕಾರ್ಯಕರ್ತರಲ್ಲಿ ಹುರುಪು ನೀಡಲಿದೆ ಎಂಬ ವಿಶ್ವಾಸ ಕಾಂಗ್ರೆಸ್ ನಲ್ಲಿದೆ.

Social media platforms are abuzz with viral news that claims Congress General Secretary Priyanka Gandhi may contest from Koppal. There are also rumours that the AICC sources have conducted surveys without informing the local Congress unit and are considering Koppal as one of the choices. There is another buzz that Telangana is AICC sources’ alternative choice. Some people on X have already started inviting the senior leader to contest from Koppal with the hashtag ‘please come to Koppal’. However, no senior congress leaders have confirmed the same. But, the local leaders are circulating the news on social media platforms.