ಬ್ರೇಕಿಂಗ್ ನ್ಯೂಸ್
14-01-24 07:08 pm HK News Desk ಕರ್ನಾಟಕ
ಬೆಳಗಾವಿ, ಜ.14: ನೂರು ವಂಶಗಳು ಬಂದು ಹೋದರೂ ಅಯೋಧ್ಯೆಯ ಒಂದು ಕಲ್ಲು ಅಲ್ಲಾಡಿಸಲು ಯಾರಿಗೂ ಆಗಲ್ಲ. ಇಂಥ ಸಮಯದಲ್ಲಿ ಹಲವರು ಅಯೋಧ್ಯೆ ಸ್ಥಳದಲ್ಲಿ ಬಾಬ್ರಿ ಮಸೀದಿ ಕಟ್ಟುವ ಹೇಳಿಕೆ ನೀಡ್ತಿದ್ದಾರೆ. ಹೀಗೆ ಹೇಳಿಕೆ ನೀಡುವವರ ನಾಲಿಗೆ ಕತ್ತರಿಸುವ ತಾಕತ್ತು ನಮ್ಮಲ್ಲಿ ಇಲ್ಲದಾಗಿದೆ. ಹಾಗಾಗಿ ಸೊಕ್ಕಿನ ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಬೆಳಗಾವಿಯ ಹಿಂದೂ ಯುವ ಸಮ್ಮಿಲನ ಕಾರ್ಯಕ್ರಮದಲ್ಲಿ ಮುತಾಲಿಕ್ ಮಾತನಾಡಿದ್ದು ಅಯ್ಯೋದ್ಯೆಯಲ್ಲೇ ರಾಮಮಂದಿರ ನಿರ್ಮಾಣ ಆಗ್ತಿದೆ. ಇಂಥ ಸಮಯದಲ್ಲಿ ಹಲವರು ಅಯೋಧ್ಯೆ ಸ್ಥಳದಲ್ಲಿ ಬಾಬ್ರಿ ಮಸೀದಿ ಕಟ್ಟುವ ಹೇಳಿಕೆ ನೀಡ್ತಿದ್ದಾರೆ. ಹೀಗೆ ಹೇಳಿದವರ ನಾಳಿಗೆ ಕತ್ತರಿಸುವ ತಾಕತ್ತು ನಮ್ಮಲ್ಲಿ ಇಲ್ಲದಾಗಿದೆ. ಈ ಕಾರಣಕ್ಕೆ ಹಲವರು ಈ ರೀತಿಯ ಸೊಕ್ಕಿನ ಹೇಳಿಕೆ ನೀಡುತ್ತಿದ್ದಾರೆ.
ನೂರು ವಂಶ ಹೋದರೂ ಅಯೋದ್ಯೆಯ ಒಂದು ಕಲ್ಲು ಅಲ್ಲಾಡಿಸಲು ಆಗಲ್ಲ. ಈ ದೇಶದ ಅನ್ನ ತಿಂದು ಹೀಗೆ ಬೊಗಳುವುದನ್ನು ನಿಲ್ಲಿಸಬೇಕು. ಇಲ್ಲದೇ ಹೋದರೆ ಪರಿಣಾಮ ನೆಟ್ಟಗಿರಲ್ಲ ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ರಾಮಮಂದಿರ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಲ್ಲಿ ಹೇಳಿಕೆಗೆ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದು ದೇಶದ ಹಲವು ಕಡೆ ರಾಮಮಂದಿರಗಳು ಇದ್ದವು. ಆದರೆ ಬಾಬರ್ ದೆಹಲಿಯಿಂದ ಅಯೋಧ್ಯೆಗೆ ಹೋಗಿ ರಾಮ ಮಂದಿರ ಧ್ವಂಸಗೊಳಿಸಿದ. ರಾಮನ ಜನ್ಮಭೂಮಿ ಅಯೋಧ್ಯೆ ಎಂಬ ಕಾರಣಕ್ಕೆ ಬಾಬರ್ ಈ ಮಂದಿರ ಧ್ವಂಸಗೊಳಿಸಿದ. ರಾಮಮಂದಿರ ಹಿಂದೂಗಳ ಸ್ವಾಭಿಮಾನ ಸಂಕೇತವಾಗಿತ್ತು, ಅದಕ್ಕೆ ಅಯೋಧ್ಯೆಯ ರಾಮಮಂದಿರ ಒಡೆಯಲಾಗಿತ್ತು.
ಅಯೋಧ್ಯೆ ರಾಮನ ಜನ್ಮಸ್ಥಳ ಒಡೆದರೆ ಹಿಂದೂಗಳ ಭಾವನೆಗೆ ಧಕ್ಕೆ ಆಗುತ್ತೆ ಎಂದು ಬಾಬರ್ಗೆ ಗೊತ್ತಾಗಿತ್ತು. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮಹತ್ವ ಸಿದ್ದರಾಮಯ್ಯಗೆ ಗೊತ್ತಾಗ್ತಿಲ್ಲ. ರಾಮ ಕೇವಲ ಆರ್ಎಸ್ಎಸ್, ಬಿಜೆಪಿಗೆ ಸೀಮಿತನಲ್ಲ, ಈತ ನೂರು ಕೋಟಿ ಹಿಂದೂಗಳ ರಾಮ. ಆದರೆ ರಾಮಮಂದಿರ ಉದ್ಘಾಟನೆ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕಾರ ಮಾಡಿದೆ. ನಿಮ್ಮಂಥ ಪಾಪಿಗಳು ಮತ್ತೊಬ್ಬರಿಲ್ಲ. ಬರುವ ದಿನಗಳಲ್ಲಿ ಹಿಂದೂಗಳು ಕಾಂಗ್ರೆಸ್ ಪಕ್ಷವನ್ನೇ ಸಂಹಾರ ಮಾಡ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಮುತಾಲಿಕ್ ಹರಿಹಾಯ್ದರು.
Even if 100 dynasties come and go, no one will be able to shake a stone in Ayodhya. At such a time, many people are making statements that the Babri Masjid will be built at the site of Ayodhya. We do not have the capacity to cut off the tongues of those who make such statements. Therefore, they are saying such arrogant things," Sri Ram Sene chief Pramod Muthalik said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm