ಬ್ರೇಕಿಂಗ್ ನ್ಯೂಸ್
16-01-24 01:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 16: ಹಿರಿಯರು ಮತ್ತು ಸ್ಥಾನಕ್ಕೆ ಯಾವ ಗೌರವ ಕೊಡಬೇಕೋ ಆ ಗೌರವವನ್ನು ಕೊಡಲೇಬೇಕು. ಅನಂತ್ ಕುಮಾರ್ ಹೆಗಡೆ ಕಾರ್ಯಶೈಲಿ ಭಿನ್ನವಿದೆ ಹಾಗೆಂದ ಮಾತ್ರಕ್ಕೆ ಇನ್ನೊಬ್ಬರ ಮನಸ್ಸಿಗೆ ನೋವುಂಟು ಮಾಡಬಾರದು ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂತಹ ಹೇಳಿಕೆಗಳನ್ನು ನಾವು ಸಮರ್ಥಿಸುವುದಿಲ್ಲ. ರಾಮ ಎಲ್ಲರನ್ನೂ ಜೋಡಿಸಿಕೊಂಡು ಹೋಗುವವನು. ಅನಂತ್ ಕುಮಾರ್ ಹೆಗಡೆ ಮುಖ್ಯಮಂತ್ರಿಗಳನ್ನು ಏಕವಚನದಲ್ಲಿ ಹೇಳಿರುವುದನ್ನು ಒಪ್ಪಿಕೊಳ್ಳುವುದಿಲ್ಲ ಎಂದರು.
ಅನಂತ್ ಕುಮಾರ್ ಹೆಗಡೆ ಅವರ ಭಾವನೆ ಇರಬಹುದು ನಿಜ, 42 ಸಾವಿರ ದೇವಾಲಯಗಳನ್ನು ಘಜನಿ, ಘೋರಿ, ಖಿಲ್ಜಿ, ಔರಂಗಜೇಜ್ ಮೊಘಲ್ ಕಾಲಘಟ್ಟದಲ್ಲಿ, ದಕ್ಷಿಣದಲ್ಲಿ ಮಲ್ಲಿಖಾಫರ್ ದಾಳಿ ಸಂದರ್ಭದಲ್ಲಿ, ಆದಿಲ್ ಷಾಹಿ ಕಾಲಘಟ್ಟದಲ್ಲಿ ನಿಜಾಮರು, ಟಿಪ್ಪು ಸುಲ್ತಾನ್ ಆಳ್ವಿಕೆಯ ಸಂದರ್ಭದಲ್ಲಿ ದೇವಾಲಯಗಳನ್ನು ಧ್ವಂಸ ಮಾಡಿ ಮಸೀದಿ ನಿರ್ಮಿಸಿರುವುದು ನಿಜ, ವಾಸ್ತವ. ಭಾರತೀಯ ಮುಸ್ಲಿಮರು ದಾಳಿಕೋರರ ಜತೆ ತಮ್ಮ ಅಸ್ಮಿತೆಯನ್ನು ಗುರುತಿಸಿಕೊಳ್ಳುವುದಿಲ್ಲ. ಭಾರತೀಯತೆ ಸನಾತನ ಪರಂಪರೆಯ ಮೇಲೆ ವಿಶ್ವಾಸವಿಟ್ಟು ಇಲ್ಲಿ ಉಳಿದು ಕೊಂಡಿದ್ದಾರೆ ಎನ್ನುವ ವಿಶ್ವಾಸ ನನಗಿದೆ. ಅವರಿಗೂ ಮನ ಪರಿವರ್ತನೆ ದಿನ ಬರಬಹುದು. ಆಕ್ರಮಣ ಮಾಡಿ ಇನ್ನೊಬ್ಬರ ಮನಸ್ಸಿಗೆ ಘಾಸಿ ಮಾಡಿ ಕಟ್ಟಿದ ಮಂದಿರದಲ್ಲಿ ನಮಾಜ್ ಮಾಡಿದರೆ ಅದು ಹರಮ್ ಆಗುತ್ತದೆ ಎಂದು ಅನಿಸಬಹುದು. ಅಂದು ಅವರು ಉದಾರತೆಯನ್ನು ಪ್ರದರ್ಶನ ಮಾಡಬಹುದು ಎಂದರು.
ಯಾರಿಗೆ ಆಗಲಿ ಏಕವಚನದಲ್ಲಿ ಮಾತನಾಡುವುದನ್ನು, ಅಗೌರವ ತರುವುದನ್ನು ಒಪ್ಪಿಕೊಳ್ಳುವುದಿಲ್ಲ. ಅನಂತ್ ಕುಮಾರ್ ಹೆಗಡೆ ಅವರು ಹೇಳಿದರೆಂದು ಅವರನ್ನು ಟೀಕೆ ಮಾಡುವ ಭರದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ನಾಯಿಗೆ ಹೋಲಿಸಿರುವುದು ಅದು ಕೂಡ ತಪ್ಪು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ಅವರನ್ನು ಏಕವಚನದಲ್ಲಿ ಮಾತನಾಡುವುದು, ಸರ್ಜಿಕಲ್ ಸ್ಟ್ರೈಕ್ ಹೀಯಾಳಿಸಿದ್ದಾರೆ ಅದು ಕೂಡ ತಪ್ಪೇ. ಹಿರಿಯರಾಗಿ ಗೌರವ ನೀಡಬೇಕು ಆಗ ಉಳಿದವರಿಗೆ ಮಾದರಿಯಾಗುತ್ತದೆ ಎಂದರು.
ಇದೇ ವೇಳೆ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ದೇವಾಲಯಗಳ ಸ್ವಚ್ಛತ ಕಾರ್ಯ ನಡೆಸುತ್ತಿದ್ದು ಮಂಗಳವಾರ ಹಿರೇಮಗಳೂರು ಶ್ರೀ ಕೋದಂಡ ರಾಮಚಂದ್ರ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತೆ ಕಾರ್ಯ ಕೈಗೊಂಡರು. ಪ್ರಧಾನಿಯವರ ಆಶಯದಂತೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಕರೆ ನೀಡಿದರು.
BJP CT Ravi slams MP Anantkumar Hegde over remarks on CM Siddaramaiah. Hegde, who is a member of parliament from the Uttara Karnataka constituency, said that “the Hindu community won’t rest until more mosques are reclaimed”. His comment was made on the lines of Babri Masjid demolition in Ayodhya and the same location where the ruling BJP party is holding the consecration ceremony of the under-construction Ram temple.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am