ಬ್ರೇಕಿಂಗ್ ನ್ಯೂಸ್
16-01-24 03:28 pm HK News Desk ಕರ್ನಾಟಕ
ಕಾರವಾರ, ಜ.16: ಪ್ರಧಾನಿ ಮೋದಿ ಅವರನ್ನು ಏಕವಚನದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದು ಸರಿಯಾಗಿದ್ರೆ, ನಾನು ಮಾತನಾಡಿದ್ದೂ ಸರಿ. ಯಾರು ನನ್ನನ್ನು ಒಪ್ಕೊತಾರೋ ಬಿಡ್ತಾರೊ ಗೊತ್ತಿಲ್ಲ, ಆ ದೇವರು ಒಪ್ಕೊಳ್ತಾನೆ. ಹಿಂದೂ ಸಮಾಜದ ಜನರು ಒಪ್ಕೊಳ್ಳತ್ತೆ ಎಂದು ಸಂಸದ ಅನಂತ ಕುಮಾರ ಹೆಗಡೆ ಹೇಳಿದ್ದಾರೆ.
ವಿವಾದಾತ್ಮಕ ಹೇಳಿಕೆ ಬಿಜೆಪಿ ನಾಯಕರಿಂದಲೇ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅನಂತ ಹೆಗಡೆ ಸಮರ್ಥನೆ ನೀಡಿದ್ದಾರೆ. ನಾನು ಹೇಳಿದಷ್ಟನ್ನು ರೆಕಾರ್ಡ್ ಮಾಡಿಕೊಳ್ಳಿ ಹಂಗೆ ಹಾಕಿಕೊಳ್ಳಿ. ನೀವು ನನ್ನ ಹೇಳಿಕೆಯನ್ನು ಕಟ್ ಮಾಡಿದ್ರೆ ನಾನು ನನ್ನ ಸೋಶಿಯಲ್ ಮಿಡಿಯಾದಲ್ಲಿ ಬಿಡ್ತೇನೆ ಎಂದು ಆರಂಭದಲ್ಲೇ ಮಾಧ್ಯಮಗಳಿಗೆ ಸೂಚನೆ ನೀಡಿದ ಹೆಗಡೆ, ಆನಂತರ ತನ್ನ ಹೇಳಿಕೆಯನ್ನು ಸಮರ್ಥಿಸಿದ್ದಾರೆ. ನನ್ನ ಹೇಳಿಕೆಯನ್ನು ಖಂಡಿಸುವುದು ಸಹಜ. ಇದು ನನ್ನ ವೈಯಕ್ತಿಕ ಹೇಳಿಕೆ, ಇದು ಪಕ್ಷದ ಹೇಳಿಕೆ ಅಲ್ಲ, ಇದು ನನ್ನ ವೈಯಕ್ತಿಕ ಹೇಳಿಕೆ. ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ. ಸಂಸ್ಕೃತಿ ಬಗ್ಗೆ ಸಿದ್ಧರಾಮಯ್ಯ ಅವರೇ ನನ್ನ ಎದುರು ಬಂದು ಮಾತನಾಡಲಿ. ಇದರ ಎಲ್ಲದರ ಬಗ್ಗೆ ನಾವಿಬ್ರೂ ಕುತ್ಕೊಂಡು ಜನರ ಮುಂದೆ ಚರ್ಚೆ ಮಾಡೋಣ. ಎಲ್ಲೋ ಕುತ್ಕೊಂಡು ಸಭೆಯಲ್ಲಿ ಮಾತನಾಡುವುದು ಸರಿ ಅಲ್ಲ ಎಂದು ಹೇಳಿದರು.
ನಮ್ಮ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಯಾರೆಲ್ಲಾ ಏನೇನ್ ಮಾತಾಡಿದಾರೆ ಹೇಳಬೇಕಾ.?ಶರದ್ ಪವಾರ್ ಮೋದಿಯರನ್ನು ಹಿಟ್ಲರ್ ಅಂತಾ ಕರೆದ್ರು. ಕಾಂಗ್ರೆಸಿನ ಬಹುತೇಕ ನಾಯಕರು ಇವರನ್ನು ಹಿಟ್ಲರ್ ಎಂದು ಕರೆದರು. ಇದಕ್ಕೆಲ್ಲಾ ಮಿಡಿಯಾದಲ್ಲೇ ದಾಖಲೆಗಳು ಇವೆ. ಸಿಎಂ ಸಿದ್ಧರಾಮಯ್ಯ ಮೋದಿಯವರನ್ನು ಏಕವಚನದಲ್ಲಿ ಮಾಸ್ ಮರ್ಡರರ್ ಎಂದು ಕರೆದರು. ಇದು ನನ್ನ ಪ್ರಧಾನಿ, ನನ್ನ ದೇಶ ನನ್ನ ಧರ್ಮದ ಬಗ್ಗೆ ಹೇಳಿರುವ ಹೇಳಿಕೆಯಲ್ಲಿ ಯಾವುದೇ ಹಿಂಜರಿಕೆ ಇಲ್ಲ.
ದಿಗ್ವಿಜಯ ಸಿಂಗ್ ಮೋದಿಯವರನ್ನ ರಾವಣ ಅಂತಾ ಕರೆದ್ರು. ಜಯರಾಂ ರಮೇಶ್ ಭಸ್ಮಾಸುರ ಅಂತಾ ಕರೆದ್ರು. ಮನೀಶ್ ಅಯ್ಯರ್ ವಿಷ ಸರ್ಪ ಅಂತಾ ಕರೆದ್ರು. ಇನ್ನೂ ಏನ್ರಿ ಹೇಳಿಸಿಕೊಳ್ಳಬೇಕು ನಾವು..?ಕಾಂಗ್ರೆಸ್ ನಾಯಕರು ಎಲ್ರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದ್ರೆ ಏನು ಅಂತಾ ನಾನು ಪಾಠ ಮಾಡ್ತೀನಿ. ಏನೂ ಮಾತನಾಡಬೇಕು ಅಂತಾ ನಾನು ಹೇಳ್ತಿನಿ. ಯಾರಿಗೆ ಯಾವ ಭಾಷೆಯಲ್ಲಿ ಹೇಗೆ ಮಾತಾಡಬೇಕು ಹಾಗೆ ಮಾತಾಡಬೇಕು
ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ..? ಅದೆಲ್ಲಾ ನಮಗೆ ಗೊತ್ತಿಲ್ಲ, ಯಾರಿಗೆ ಹೇಗೆ ಮಾತಾಡಬೇಕು ನಮಗೆ ಗೊತ್ತು. ರಾಮ ಮಂದಿರ ಬಗ್ಗೆ ಬಗ್ಗೆ ಎಷ್ಟು ಅವಹೇಳನಕಾರಿಯಾಗಿ ಮಾತಾಡಿದ್ರು. ಎಷ್ಟು ಕೀಳಾಗಿ ಹಿಂದೂ ಸಮಾಜದ ಬಗ್ಗೆ ಮಾತಾಡಿದ್ರು. ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ..? 20 % ಮತಕ್ಕಾಗಿ ಎಷ್ಟೊಂದು ಜೊಲ್ಲೂ ಸುರಿಸುತ್ತಾ ಮಾತನಾಡುತ್ತಾರೆ. 80 ರಿಂದ 85% ಇರುವ ಹಿಂದೂ ಸಮಾಜದ ಬಗ್ಗೆ ನಿಮಗೆ ಗೌರವ ಯಾಕಿಲ್ಲ. ನನ್ನ ಧ್ವನಿ ಇದೇ ರೀತಿ. ಏಕವಚನದಲ್ಲಿ ನೀವೂ ಮಾತನಾಡಿದ್ದೂ ಸರಿ ಆಗಿದ್ರೆ, ನಾನು ಮಾತನಾಡಿದ್ದೂ ಕೂಡಾ ಸರಿ. ಯಾರೂ ನನ್ನ ಒಪ್ಕೊತಾರೆ ಬಿಡ್ತಾರೋ ಗೊತ್ತಿಲ್ಲ, ಆ ದೇವರು ಒಪ್ಕೊಳ್ತಾನೆ. ಹಿಂದೂ ಸಮಾಜದ ಜನರು ಒಪ್ಕೊಳ್ತಾರೆ.
ನಾಲ್ಕೂವರೆ ವರ್ಷ ಎಲ್ಲಿದ್ರೂ , ಕುಂಭಕರ್ಣ ಎಂಬ ಕಾಂಗ್ರೆಸ್ ಟೀಕೆ ಮಾಡಿರುವ ವಿಚಾರದಲ್ಲಿ, ಅದಕ್ಕೆಲ್ಲಾ ನಾನು ಮುಂದಿನ ದಿನಗಳಲ್ಲಿ ಉತ್ತರ ಕೊಡ್ತೇನೆ. ಎಲ್ಲದಕ್ಕೂ ಉತ್ತರ ಕೊಡ್ತೇನೆ, ಯಾವುದಕ್ಕೂ ಬಡ್ಡಿ ಗಿಡ್ಡಿ ಇಟ್ಟುಕೊಳ್ಳುವ ಪ್ರಶ್ನೆ ಇಲ್ಲ ಎಂದು ಹೇಳಿದರು.
Ananth kumar hegde says i am not guilt of calling CM Siddaramaiah in singular words.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm