ಬ್ರೇಕಿಂಗ್ ನ್ಯೂಸ್
17-01-24 03:50 pm HK News Desk ಕರ್ನಾಟಕ
ತುಮಕೂರು, ಜ.17: 92 ರಲ್ಲಿ ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್ನಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಕ್ಕೆ ಹೋದರೆ ಅಲ್ಲೊಂದು ವೈಬ್ರೇಶನ್ ಇರುತ್ತದೆ. ಭಕ್ತಿ ತುಂಬಿ ಬರುತ್ತದೆ. ಆದರೆ ಆವತ್ತು ನನಗೇನೂ ಅನಿಸಲೇ ಇಲ್ಲ. ಟೂರಿಂಗ್ ಟಾಕೀಸ್ನಲ್ಲಿ ಗೊಂಬೆ ಇಟ್ಟಂಗಿತ್ತು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅಯೋಧ್ಯೆ ರಾಮಲಲ್ಲಾನ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.
ಹಿಂದುಳಿದ ವರ್ಗಗಳ ಒಕ್ಕೂಟದ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹೊತ್ತಲ್ಲೇ ರಾಮ ಜನ್ಮಭೂಮಿ ಬಗ್ಗೆ ಅವಹೇಳನ ಮಾಡುವ ರೀತಿ ಮಾತನಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ ಸಂಸದ ಅನಂತಕುಮಾರ ಹೆಗಡೆ ಬಗ್ಗೆಯೂ ವಾಗ್ದಾಳಿ ನಡೆಸಿದ ಅವರು, ನಾಲ್ಕೂವರೆ ವರ್ಷ ಮಲಗಿರುತ್ತಾನೆ, ಅದೆಲ್ಲಿ ಇರುತ್ತಾನೋ? ಚುನಾವಣೆಗೆ ಆರು ತಿಂಗಳು ಇರುವಾಗ ಬಂದು ಏನೆಲ್ಲ ಮಾತನಾಡುತ್ತಾನೆ. ಹಿಂದುತ್ವ ಹಿಂದುತ್ವ ಅಂತಾನೆ. ಚುನಾವಣೆ ಮುಗಿದ ಮೇಲೆ ಹೊರಟೋದರೆ ಪತ್ತೇನೆ ಇರಲ್ಲ. ಜನರ ಭಾವನೆಗಳನ್ನು ಕೆರಳಿಸೋನು ಜನಪ್ರತಿನಿಧಿ ಆಗಲು ನಾಲಾಯಕ್ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರ ಬಗ್ಗೆ ಅವನ್ಯಾವನೋ ದುರಹಂಕಾರಿನೋ, ಅಹಂಕಾರಿನೋ, ಮನುಷ್ಯನೋ, ಮೃಗನೋ ಗೊತ್ತಿಲ್ಲ... ಮಗನೇ ಅಂತ ಕರೀತಾನಲ್ಲ, ಅವನಿಗೆ ಎಷ್ಟು ಧೈರ್ಯ ಇರಬೇಕು ಎಂದು ರಾಜಣ್ಣ ಹರಿಹಾಯ್ದರು. ಬ್ರಾಹ್ಮಣ ಸಮುದಾಯದವರು ಬೇರೆಯವರಿಗೆ ತೊಂದರೆ ಕೊಡುವುದು, ಹೀಯಾಳಿಸುವುದನ್ನು ಮಾಡುವುದಿಲ್ಲ. ಇವನು ಬ್ರಾಹ್ಮಣನೆಂದು ಹೇಳಿಕೊಳ್ಳುತ್ತಾನೆ. ಆದರೆ ಸಮಾಜದ ನಿಕೃಷ್ಟ ಮನುಷ್ಯನೂ ಮಾಡದಂತಹ ನಡವಳಿಕೆ ತೋರಿಸುತ್ತಾನೆ ಎಂದರು.
Karnataka minister and Congress leader KN Rajanna triggered a controversy when he claimed that the BJP was cheating people in the name of Lord Ram and compared the deity to "two dolls kept in a tent". "There are Ram temples with a history dating back thousands of years. These are holy places.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm