ಬ್ರೇಕಿಂಗ್ ನ್ಯೂಸ್
20-01-24 10:31 pm HK News Desk ಕರ್ನಾಟಕ
ಮೈಸೂರು, ಜ.20: ಅಯೋಧ್ಯೆಯಲ್ಲಿ ಪ್ರತಿಷ್ಠೆಯಾಗಲಿರುವ ಅಪೂರ್ವ ರಾಮಲಲ್ಲಾನ ಮೂರ್ತಿ ಮೈಸೂರಿನಲ್ಲಿ ಕೆತ್ತಿದ ಶಿಲೆಯಿಂದ ಆಗಿದೆ ಎನ್ನುವ ಸುದ್ದಿ ಮೈಸೂರಿನ ಜನರಲ್ಲಿ ಪುಳಕ ಸೃಷ್ಟಿಸಿದೆ. ಈಗ ರಾಮನ ಮೂರ್ತಿಯ ಕೃಷ್ಣ ಶಿಲೆ ಸಿಕ್ಕಿದ ಜಾಗದಲ್ಲಿ ರಾಮನ ಮಂದಿರ ನಿರ್ಮಿಸಲು ಜನರು ಮುಂದಾಗಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಈ ಘೋಷಣೆ ಮಾಡಿದ್ದಾರೆ. ಜನವರಿ 22ರಂದು ಶಿಲೆ ಸಿಕ್ಕ ಜಾಗದಲ್ಲಿ ಭೂಮಿ ಪೂಜೆ ಮಾಡುತ್ತೇವೆ. ನಂತರ ಎಲ್ಲಾ ಜನರ ಬಳಿ ದೇಣಿಗೆ ಸಂಗ್ರಹ ಮಾಡಿ ಮಂದಿರ ನಿರ್ಮಾಣ ಮಾಡುತ್ತೇವೆ. ಇದಕ್ಕೆ ಜಮೀನು ಮಾಲೀಕ ರಾಮದಾಸ್ ಕೂಡ ಒಪ್ಪಿದ್ದಾರೆ ಎಂದು ಜಿಟಿ ದೇವೇಗೌಡ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿದೆ. ದೇಶದ ಜನರು ಎದುರು ನೋಡುತ್ತಿರುವ ಬಾಲ ರಾಮನ ವಿಗ್ರಹ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿಯ ದಲಿತ ಸಮುದಾಯದ ಮುಖಂಡ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಆಗಿದೆ. ಇದು ನಮಗೆಲ್ಲ ಸಂತೋಷ. ನಮ್ಮ ದಲಿತ ಬಾಂಧವರ ಜಮೀನಿನಲ್ಲಿ ಮೂಡಿ ಬಂದಿರುವ ಶಿಲೆ ಎಂಬುದು ಹೆಮ್ಮೆ.
ಈ ಶಿಲೆಯನ್ನ ಕೆತ್ತನೆ ಮಾಡಿರುವವರು ನಮ್ಮ ಮೈಸೂರಿನವರು. ಕೃಷ್ಣ ಶಿಲೆಯನ್ನ ಹುಡುಕಿದ್ದ ಶ್ರೀನಿವಾಸ್ ಕೂಡ ನಮ್ಮ ಮೈಸೂರಿನವರು. ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬಂದಿದ್ದ ವೇಳೆ ಚಾಮುಂಡೇಶ್ವರಿ ಸನ್ನಿದಾನದಲ್ಲಿ ಪ್ರಾರ್ಥನೆ ಮಾಡಿದ್ದರು. ಈಗ ಅದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕಿದೆ. ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗುತ್ತದೆ. ಅದೇ ವೇಳೆ ಕೃಷ್ಣ ಶಿಲೆ ಸಿಕ್ಕ ಸ್ಥಳದಲ್ಲಿ ವಿಶೇಷ ಪೂಜೆ ನಡೆಸಲಾಗುವುದು. ರಾಮನ ಮಂದಿರಕ್ಕಾಗಿ ಅಡಿಗಲ್ಲು ಹಾಕುತ್ತೇವೆ ಎಂದು ತಿಳಿಸಿದ್ದಾರೆ.
The news that the statue of Apoorva Ram Lalla, who will be installed in Ayodhya, is made of stone carved in Mysuru has created a sensation among the people of Mysuru. Now, people have come forward to build a Ram temple at the site where the Krishna stone of the idol of Lord Ram was found.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm