ಬ್ರೇಕಿಂಗ್ ನ್ಯೂಸ್
23-01-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ತಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಜೆಪಿಯ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದಿರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.
ಬಿಜೆಪಿಯವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ.
ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ನೂರಾದರೂ ಭಕ್ತಿವೊಂದೇ, ಕರ್ಮ ಹಲವಾದರೂ ನಿಷ್ಠೆವೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
D K Shivakumar slams BJP for stopping Rahul Gandhi Bharat Jodo Nyay Yatra. The Rahul Gandhi-led Bharat Jodo Nyay Yatra was stopped from entering Guwahati city on Tuesday, triggering protests from Congress workers who broke barricades and raised slogans
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm