ಬ್ರೇಕಿಂಗ್ ನ್ಯೂಸ್
24-01-24 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜ 24: ಯುವಕನೊಬ್ಬ ರಸ್ತೆ ಬದಿಯಲ್ಲೇ ಕಾರು ನಿಲ್ಲಿಸಿ ಯುವತಿಯೊಬ್ಬಳೊಡನೆ ಹಾಡಹಗಲಿನಲ್ಲೇ ಸೆಕ್ಸ್ ನಡೆಸುತ್ತಿದ್ದ ವೇಳೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲ್ಲಲು ಯತ್ನಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ಸಿಬ್ಬಂದಿ ಮಹೇಶ್ ಖಾಸಗಿ ಆಸ್ಪತೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ್ ಶನಿವಾರ ಉಪಕಾರ್ ಲೇಔಟ್ ನಲ್ಲಿದ್ದ ತಮ್ಮ ಮನೆಯ ಬಳಿ KA 02 MR 8102 ನೋಂದಣಿಯ ಕಾರೊಂದರಲ್ಲಿ ಅಸಹಜವಾದ ಚಟುವಟಿಕೆ ನಡೆಯುತ್ತಿರುವುದನ್ನು ಗಮನಿಸಿದ್ದರು. ಕಾರ್ ಬಳಿ ತೆರಳಿದಾಗ ಯುವಕನೊಬ್ಬ ಯುವತಿಯೊಬ್ಬಳೊಡನೆ ಸಂಭೋಗ ನಡೆಸುತ್ತಿರುವ ದೃಶ್ಯ ಕಂಡುಬಂದಿತ್ತು.
ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ಜನವಸತಿ ಸ್ಥಳದಲ್ಲಿ ಈ ರೀತಿಯ ವರ್ತನೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದಾಗ ಯುವಕ ಕೂಡಲೇ ಕಾರನ್ನು ಮಹೇಶ್ ಅವರ ಮೇಲೆ ಹತ್ತಿಸಿದ್ದ. ಸುಮಾರು 500 ಮೀಟರ್ ದೂರ ಮಹೇಶ್ ಅವರನ್ನು ಎಳೆದೊಯ್ದ ಆರೋಪಿ ಬಳಿಕ ಅವರನ್ನು ಬದಿಗೆ ಕೆಡವಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಮಹೇಶ್ ಅವರ ಮೊಬೈಲ್ ಕಾರಿನ ವೈಪರ್ ಗೆ ಸಿಲುಕಿಕೊಂಡಿತ್ತು. ತನ್ನನ್ನು ಹಿಂಬಾಲಿಸಲು ಬಂದವರ ಮೇಲೂ ಕಾರು ಹತ್ತಿಸಿ ಅಪಘಾತ ಮಾಡಲು ಯತ್ನಿಸಿದ್ದ.
ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಮಹೇಶ್ ಅವರನ್ನು ಸ್ಥಳೀಯರು ಸಮೀಪದ ಖಾಗಿಸ ಆಸ್ಪತ್ರೆಗೆ ವರ್ಗಾಯಿಸಿದ್ದರು. ಮಹೇಶ್ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ ಅಪಘಾತ ಎಸಗಿದ್ದ ಯುವಕ ರೋಹನ್ ಪೊಲೀಸ್ ಠಾಣೆಗೆ ತೆರಳಿ ಮಹೇಶ್ ಅವರ ಮೊಬೈಲ್ ಕೊಟ್ಟು ಅಲ್ಲಿಂದ ಪರಾರಿಯಾಗಿದ್ದ. ಸ್ಥಳೀಯ ಸಿಸಿಟಿವಿ ಹಾಗೂ ಮಹೇಶ್ ಅವರ ಹೇಳಿಕೆಯನ್ನು ಆಧರಿಸಿ ಆರೋಪಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
Youth rams car on police for questioning him of having sex in car in Bangalore. The police personal us said to be injured and is going treatment at a private hospital in Bangalore
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm