Congress, HC Balakrishna: ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ದರೆ ಕಾಂಗ್ರೆಸ್ ಗ್ಯಾರಂಟಿ ಯೋಜನೆ ರದ್ದು ; ಚರ್ಚೆಗೀಡು ಮಾಡಿದ ಮಾಗಡಿ ಬಾಲಕೃಷ್ಣ ಹೇಳಿಕೆ 

31-01-24 04:05 pm       Bangalore Correspondent   ಕರ್ನಾಟಕ

ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ. 

ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ. 

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.

ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ. 

ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.

The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.