ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm