ಕೇಂದ್ರದಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ; ಹೀಗೇ ಆದಲ್ಲಿ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ; ಕಿಡಿ ಹೊತ್ತಿಸಿದ ಡಿಕೆ ಸುರೇಶ್ 

01-02-24 06:22 pm       Bangalore Correspondent   ಕರ್ನಾಟಕ

ಕೇಂದ್ರ ಬಜೆಟ್‌ನಲ್ಲಿ ಹೊಸದೇನೂ ಇಲ್ಲ. ಪ್ರತಿ ಬಾರಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ರೀತಿ ಅನ್ಯಾಯ ಮುಂದುವರಿದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, ಫೆ.1: ಕೇಂದ್ರ ಬಜೆಟ್‌ನಲ್ಲಿ ಹೊಸದೇನೂ ಇಲ್ಲ. ಪ್ರತಿ ಬಾರಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ರೀತಿ ಅನ್ಯಾಯ ಮುಂದುವರಿದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಬಜೆಟ್ ಹೆಸರಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆಗಿದ್ದಾರೆ. 

ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆಗಳನ್ನು ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಬಜೆಟ್‌ ನಲ್ಲಿ ನಾಮಫಲಕ ಮಾತ್ರ ಬದಲಾಯಿಸಿದ್ದು ಅದರ ಬದಲಿಗೆ ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಎಕನಾಮಿಕ್ ಸರ್ವೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು? ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿವೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್‌ ಇದಾಗಿದೆ ಎಂದರು.

Lok Sabha MP from Bengaluru Rural DK Suresh accused the centre of not releasing funds to South Indian states and threatened to raise a demand for a separate country if the trend continues. Suresh made the statement outside the Parliament in Delhi while criticising the budget presented by Finance Minister Nirmala Sitharaman.