ಬ್ರೇಕಿಂಗ್ ನ್ಯೂಸ್
01-02-24 07:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 01: ವಿಕಸಿತ ಭಾರತ ಅಲ್ಲ, ವಿಕಸಿತ ಬಜೆಟ್ ಅಲ್ಲ. ಕೇಂದ್ರ ಸರ್ಕಾರದ್ದು ವಿನಾಶಕಾರಿ ಭಾರತ ಮಾಡುವ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ, ಬಡವರು, ಮಹಿಳೆಯರು, ಯುವಕರು ಹಾಗೂ ರೈತರ ಬಗ್ಗೆ ನಂಬಿಕೆ ಇದೆ ಎಂದು ಹೇಳುತ್ತಾರೆ. ಆದರೆ, ಇದೊಂದು ವಿನಾಶಕಾರಿ ಬಜೆಟ್ ಎಂದರು.
ನಾವು ಅನ್ನಭಾಗ್ಯ, ಯುವನಿಧಿ, ಶಕ್ತಿ, ಕೃಷಿ ಭಾಗ್ಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. 45 ವರ್ಷಗಳಲ್ಲಿ ನಿರುದ್ಯೋಗ ಜಾಸ್ತಿಯಾಗಿದೆ. ಅದಕ್ಕೆ ಪರಿಹಾರ ಹೇಳಿಲ್ಲ. ಎಂಎಸ್ಪಿಗೆ ಕೆಲವೇ ಬೆಳೆಗಳನ್ನು ಸೇರಿಸಿದ್ದಾರೆ. ಭತ್ತ ರಾಗಿ ಗೋಧಿಯನ್ನು ಸೇರಿಸಿಲ್ಲ. ಇದೊಂದು ಚುನಾವಣಾ ಬಜೆಟ್. ದೇಶದ ಒಟ್ಟು ಸಾಲವನ್ನು 1.90 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದೆ ಎಂದು ಕಿಡಿಕಾರಿದರು.

ಕಳೆದ ವರ್ಷಕ್ಕಿಂತ 5.8% ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಆಡಿಲ್ಲ. ಸಾಲ ಹೆಚ್ಚಾಗಿರುವುದು, ಒಟ್ಟು ಸಾಲದ ಪ್ರಮಾಣ ವಿಪರೀತ ಏರಿಕೆ ಆಗಿರುವುದನ್ನು ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರು 2024-25 ನೇ ವರ್ಷಕ್ಕೆ ಮಧ್ಯಂತರ ಆಯವ್ಯಯ ಮಂಡಿಸಿದ್ದಾರೆ. 47,65,758 ಕೋಟಿ ರೂ.ಗಾತ್ರದ ಬಜೆಟ್ ಇದಾಗಿದೆ. ಕಳೆದ ವರ್ಷಕ್ಕಿಂತ 2,62671 ಕೋಟಿ ಹೆಚ್ಚುವರಿ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಈ ವರ್ಷ 5.8% ಹೆಚ್ಚಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬಜೆಟ್ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85494 ಕೋಟಿ ರೂ. ಸಾಲ ಮಾಡಿದ್ದಾರೆ. ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆ ಏರಿಕೆ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ತೆರಿಗೆಯನ್ನು ಕಾರ್ಪೊರೇಟ್ಗಳ ಮೇಲಿನ ಪ್ರಮಾಣ ಶೇ. 30ಕ್ಕೆ ಇಳಿಸಿ, ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಹಾಗೂ ಹೆಚ್ಚಿಸಿದ್ದಾರೆ. ಬಡವರು, ಮಹಿಳೆಯರು, ಅಲ್ಪಸಂಖ್ಯಾತರು ಹಾಗೂ ದಲಿತರ ವಿರೋಧಿ ಬಜೆಟ್ ಆಗಿದ್ದು, ಅತ್ಯಂತ ನಿರಾಶಾದಾಯಕವಾಗಿದೆ ಎಂದು ಟೀಕಿಸಿದರು.
ದೇಶದ ವಿನಾಶಕಾರಿ ಕುಸಿತದ ಬಜೆಟ್:
2004-14ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ 13.79% ಇತ್ತು. ಈಗ ಬಜೆಟ್ ಬೆಳವಣಿಗೆ 9.6%ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು 9.6% ಗೆ ತಂದಿದ್ದಾರೆ. 4.19%ರಷ್ಟು ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರ್ಕಾರದಲ್ಲಿ ಶೇ 11.14% ಇತ್ತು, ಎನ್.ಡಿ.ಎ ಕಾಲದಲ್ಲಿ 6.4% ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ದೇಶದ ವಿನಾಶಕಾರಿ ಕುಸಿತದ ಬಜೆಟ್ ಎಂದು ಸಿಎಂ ವ್ಯಾಖ್ಯಾನಿಸಿದರು.
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಅನುದಾನ ಬಂದಿಲ್ಲ. 15ನೇ ಹಣಕಾಸು, ಫೆರಿಫೆರಲ್ ರಿಂಗ್ ರೋಡಿಗೆ ಹಣ ಬಂದಿಲ್ಲ. 5,300 ಕೋಟಿ, ಭದ್ರ ಮೇಲ್ದಂಡೆ ಯೋಜನೆಗೆ ನೀಡಿಲ್ಲ. ಬರಗಾಲದ ಪರಿಹಾರಕ್ಕೂ ಒಂದು ಪೈಸೆ ಬಂದಿಲ್ಲ. ದೇಶದ ಸಾರ್ವಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರವು ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ. ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ರಾಯಚೂರು ಜಿಲ್ಲೆಗೆ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು, ಪ್ರಯೋಜನ ಆಗಿಲ್ಲ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೇ ಕೊಡಬೇಕು ಎಂದು ಒತ್ತಾಯಿಸಿದರು.
![]()
ಸಿದ್ದರಾಮಯ್ಯ ಅವಧಿಯಲ್ಲಿ 15ನೇ ಹಣಕಾಸು ಆಯೋಗದ ಮುಂದೆ ಪರಿಣಾಮಕಾರಿಯಾಗಿ ಮಂಡಿಸಿಲ್ಲ ಎಂಬ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಕರ್ನಾಟಕ ಸರ್ಕಾರಕ್ಕೆ ಅನ್ಯಾಯವಾಗಿದ್ದರೆ ಅದು ಬಿಜೆಪಿ ಸರ್ಕಾರದಿಂದ. ಬರಗಾಲವಿದೆ ಎಂದು 26 ಸಂಸದರು ಕೇಂದ್ರದ ಮುಂದೆ ಹೇಳಿದ್ದಾರೆಯೇ? ಈ ಎಲ್ಲ ಸಂಸದರೂ ರಾಜ್ಯದ ಪರವಾಗಿ ಇವತ್ತಿನವರೆಗೂ ಬಾಯಿಯನ್ನೇ ಬಿಟ್ಟಿಲ್ಲ. ನಾವು ಕೇಳುತ್ತಿರುವುದು ಕರ್ನಾಟಕದ ಜನರಿಗೆ ಅನ್ಯಾಯ ಮಾಡಬೇಡಿ ಎಂದು. ಆದರೆ, ಸಂಸದರು ಹೇಳುತ್ತಲೇ ಇಲ್ಲ. ನಮ್ಮ ಸಂಸದರಿಗೆ ಮೋದಿ ಮತ್ತು ಅಮಿತ್ ಶಾ ಅವರನ್ನು ಕಂಡರೆ ಭಯ. ಅದಕ್ಕೇ ಅವರು ಕೇಳುವುದಿಲ್ಲ ಎಂದರು.
ಆಯವ್ಯಯವೇ ಶ್ವೇತಪತ್ರ: ಕರ್ನಾಟಕದ ಆರ್ಥಿಕತೆ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಆಯವ್ಯಯವೇ ಶ್ವೇತಪತ್ರ. 16ನೇ ಹಣಕಾಸು ಆಯೋಗದ ಮುಂದೆ ನಮ್ಮ ಮಂಡನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಎಷ್ಟು ಅನುದಾನ ಮೀಸಲಿಟ್ಟಿದೆ ಎನ್ನುವುದನ್ನು ಪರಿಶೀಲಿಸಬೇಕಿದೆ, ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಹೇಳಿದರು.
Karnataka Cm Siddaramaiah disappointed over Budget 2024. Says no single Rupee for Drought effected areas, no news about Unemployment he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm