ಬ್ರೇಕಿಂಗ್ ನ್ಯೂಸ್
02-02-24 08:05 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2: ಹಂತ ಹಂತವಾಗಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಟೆಲಿ ಐಸಿಯು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ನುರಿತ ತಜ್ಞ ವೈದ್ಯರಿಂದ ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ದೊರೆಯುವಂತಾಗಬೇಕು. ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಾಗಿ ಹಳ್ಳಿಗಾಡಿನ ಜನರಿಗೆ ದೂರದ ಜಿಲ್ಲೆಗಳಿಗೆ ಬರುವುದು ಕಷ್ಟವಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿಯೇ ಸೂಪರ್ ಸ್ಪೆಷಾಲಿಟಿ ಕೇರ್ ಅನ್ನ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ಸಹಕಾರಿ. ತಾಲೂಕು ಮಟ್ಟದಲ್ಲಿ ಐಸಿಯು ಕೇಂದ್ರಗಳನ್ನು ಸ್ಥಾಪಿಸಿ, ಇಲ್ಲಿಂದಲೇ ಅವುಗಳನ್ನು ಪರಿಶೀಲಿಸುವ ತಂತ್ರಜ್ಞಾನಗಳ ಬಳಕೆಗೆ ನಾವು ಒತ್ತು ನೀಡಿದ್ದೇವೆ. ತುರ್ತು ಪರಿಸ್ಥಿತಿಯಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೋಗ್ಯ ಪರಿಶೀಲನೆ ಹಾಗೂ ಚಿಕಿತ್ಸಾ ಸಲಹೆಗಳನ್ನ ಟೆಲಿ ಐಸಿಯು ಮೂಲಕ ತಜ್ಞ ವೈದ್ಯರಿಂದ ಪಡೆಯಬಹುದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈಗಾಗಲೇ ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಈ ವ್ಯವಸ್ಥೆಯನ್ನ ಜಾರಿಗೆ ತರಲಾಗಿದ್ದು, ಇದೀಗ ಬೆಂಗಳೂರಿನ ವಿಕ್ಟೋರಿಯಾ ಹಾಗೂ ಬಳ್ಳಾರಿ ಮೆಡಿಕಲ್ ಕಾಲೇಜುಗಳಲ್ಲಿ ಟೆಲಿಐಸಿಯು ಅನುಷ್ಠಾನಗೊಳಿಸಿದ್ದೇವೆ. ಒಟ್ಟು ನಾಲ್ಕು ಸರ್ಕಾರಿ ವೈದ್ಯಕೀಯ ಸಂಸ್ಥೆಗಳನ್ನ ಹಬ್ ಗಳಾಗಿ ರಚಿಸಲಾಗಿದ್ದು, ಇವುಗಳಿಗೆ 41 ತಾಲೂಕು ಆಸ್ಪತ್ರೆಗಳನ್ನ ಲಿಂಕ್ ಮಾಡಲಾಗಿದೆ. ಈ 41 ತಾಲೂಕು ಆಸ್ಪತ್ರೆಗಳಲ್ಲಿ 10 ಟೆಲಿಐಸಿಯು ಬೆಡ್ ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, AI ತಂತ್ರಜ್ಞಾನಗಳ ಮೂಲಕ ತಜ್ಞ ವೈದ್ಯರ ಸಲಹೆಯೊಂದಿಗೆ ಸೂಪರ್ ಸ್ಪೆಷಾಲಿಟಿ ಕೇರ್ ರೋಗಿಗಳಿಗೆ ದೊರೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರು ಹಾಗೂ ಬಳ್ಳಾರಿ ಕ್ಲಸ್ಟರ್ ಗೆ ತಲಾ 9 ತಾಲೂಕು ಆಸ್ಪತ್ರೆಗಳನ್ನ ಜೋಡಿಸಲಾಗಿದ್ದು, ಹುಬ್ಬಳ್ಳಿ ಕಿಮ್ಸ್ ಗೆ 10 ಹಾಗೂ ಮೈಸೂರು ವೈದ್ಯಕೀಯ ಸಂಸ್ಥೆಗೆ 13 ತಾಲೂಕು ಆಸ್ಪತ್ರೆಗಳನ್ನ ಲಿಂಕ್ ಮಾಡಲಾಗಿದೆ. ಒಟ್ಟು 41 ತಾಲೂಕು ಆಸ್ಪತ್ರೆಗಳನ್ನ ಸ್ಪೋಕ್ ಕೇಂದ್ರಗಳನ್ನಾಗಿ ರಚಿಸಲಾಗಿದೆ.
ಮುಂದಿನ ವರ್ಷ 60 ತಾಲೂಕು ಆಸ್ಪತ್ರೆಗಳಲ್ಲಿ ಟೆಲಿಐಸಿಯು ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಹಂತ ಹಂತವಾಗಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿಐಸಿಯು ಮೂಲಕ ತಜ್ಞ ವೈದ್ಯರ ಆರೋಗ್ಯ ಸೇವೆ ಕಲ್ಪಿಸಿಕೊಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Health Minister Dinesh Gundu Rao has said that tele-ICU facilities will be provided in all taluk hospitals in the state in a phased manner. He was speaking at the inauguration of the tele-ICU at Victoria Hospital in Bengaluru today.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm