ಬ್ರೇಕಿಂಗ್ ನ್ಯೂಸ್
23-11-20 12:35 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 23: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದೆ. ಪುಲಿಕೇಶೀನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಬೆಳಗಿನ ಜಾವ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ಮನೆ ಮೇಲೆ ದಾಳಿ ನಡೆಸಿತು. ದಾಳಿಯ ನೋಟಿಸ್ ಕೊಟ್ಟು ಮನೆ ಒಳಗೆ ಪ್ರವೇಶಿಸಿರುವ ಅಧಿಕಾರಿಗಳು, ಮನೆಯವರ ಮೊಬೈಲ್ ಗಳನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಐಎಂಎ ನಿಂದ ಚಿನ್ನದ ಆಭರಣ ಹಾಗೂ ಕೋಟ್ಯಂತರ ರೂಪಾಯಿ ಬೇಗ್ ಪಡೆದ ಆರೋಫಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸಿರುವ ಅಧಿಕಾರಿಗಳು ಹೆಚ್ಚುವರಿ ಸಾಕ್ಷಾಧಾರಗಳ ಸಂಗ್ರಹಕ್ಕೆ ಮುಂದಾಗಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ರೋಷನ್ ಬೇಗ್ ಅವರನ್ನು ಬಂಧಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆ ಮುಂದೆ ಹಾಜರು ಪಡಿಸಿದ್ದರು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನ ಕ್ವಾರೆಂಟೈನ್ ಸೆಲ್ನಲ್ಲಿದ್ದಾರೆ. ಬಂಧನ ಆಗುತ್ತಿದ್ದಂತೆ ಇದೀಗ ಸಿಬಿಐ ದಾಳಿ ನಡೆದಿದೆ.
ಐಎಂಎ ಕಂಪನಿಯಿಂದ 200 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದ ಆರಂಭಿಕ ದಿನಗಳಲ್ಲಿ ಐಎಂಎ ಸಂಸ್ಥಾಪಕ, ಸಿಇಓ ಮನ್ಸೂರ್ ಖಾನ್ ಅವರೇ ರೋಷನ್ ಬೇಗ್ ಅವರ ಮೇಲೆ ಆರೋಪ ಮಾಡಿದ್ದರು. ಐಎಂಎ ಕಂಪನಿಯಿಂದ ರೋಷನ್ ಬೇಗ್ ಬೇಕಾದಾಗೆಲ್ಲಾ ಹಣ ಪಡೆದಿದ್ದಾರೆ. ಅದನ್ನು ವಾಪಸು ಕೇಳಿದಾಗ ಸ್ಥಳೀಯ ರೌಡಿಗಳಿಂದ ಬೆದರಿಸಿದ್ದರು ಎಂಬ ಅಡಿಯೋ ಅಂದಿನ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರಿಗೆ ಮನ್ಸೂರ್ ಆಲಿಖಾನ್ ಅವರೇ ಕಳಿಸಿಕೊಟ್ಟಿದ್ದರು.
A search by the Central Bureau of Investigation (CBI) is underway at the Bengaluru residence of former Karnataka minister R Roshan Baig.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm