ಬ್ರೇಕಿಂಗ್ ನ್ಯೂಸ್
23-11-20 12:35 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 23: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದೆ. ಪುಲಿಕೇಶೀನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಬೆಳಗಿನ ಜಾವ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ಮನೆ ಮೇಲೆ ದಾಳಿ ನಡೆಸಿತು. ದಾಳಿಯ ನೋಟಿಸ್ ಕೊಟ್ಟು ಮನೆ ಒಳಗೆ ಪ್ರವೇಶಿಸಿರುವ ಅಧಿಕಾರಿಗಳು, ಮನೆಯವರ ಮೊಬೈಲ್ ಗಳನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಐಎಂಎ ನಿಂದ ಚಿನ್ನದ ಆಭರಣ ಹಾಗೂ ಕೋಟ್ಯಂತರ ರೂಪಾಯಿ ಬೇಗ್ ಪಡೆದ ಆರೋಫಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸಿರುವ ಅಧಿಕಾರಿಗಳು ಹೆಚ್ಚುವರಿ ಸಾಕ್ಷಾಧಾರಗಳ ಸಂಗ್ರಹಕ್ಕೆ ಮುಂದಾಗಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ರೋಷನ್ ಬೇಗ್ ಅವರನ್ನು ಬಂಧಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆ ಮುಂದೆ ಹಾಜರು ಪಡಿಸಿದ್ದರು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನ ಕ್ವಾರೆಂಟೈನ್ ಸೆಲ್ನಲ್ಲಿದ್ದಾರೆ. ಬಂಧನ ಆಗುತ್ತಿದ್ದಂತೆ ಇದೀಗ ಸಿಬಿಐ ದಾಳಿ ನಡೆದಿದೆ.
ಐಎಂಎ ಕಂಪನಿಯಿಂದ 200 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದ ಆರಂಭಿಕ ದಿನಗಳಲ್ಲಿ ಐಎಂಎ ಸಂಸ್ಥಾಪಕ, ಸಿಇಓ ಮನ್ಸೂರ್ ಖಾನ್ ಅವರೇ ರೋಷನ್ ಬೇಗ್ ಅವರ ಮೇಲೆ ಆರೋಪ ಮಾಡಿದ್ದರು. ಐಎಂಎ ಕಂಪನಿಯಿಂದ ರೋಷನ್ ಬೇಗ್ ಬೇಕಾದಾಗೆಲ್ಲಾ ಹಣ ಪಡೆದಿದ್ದಾರೆ. ಅದನ್ನು ವಾಪಸು ಕೇಳಿದಾಗ ಸ್ಥಳೀಯ ರೌಡಿಗಳಿಂದ ಬೆದರಿಸಿದ್ದರು ಎಂಬ ಅಡಿಯೋ ಅಂದಿನ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರಿಗೆ ಮನ್ಸೂರ್ ಆಲಿಖಾನ್ ಅವರೇ ಕಳಿಸಿಕೊಟ್ಟಿದ್ದರು.
A search by the Central Bureau of Investigation (CBI) is underway at the Bengaluru residence of former Karnataka minister R Roshan Baig.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm