ಬ್ರೇಕಿಂಗ್ ನ್ಯೂಸ್
23-11-20 12:35 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 23: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದೆ. ಪುಲಿಕೇಶೀನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಬೆಳಗಿನ ಜಾವ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ಮನೆ ಮೇಲೆ ದಾಳಿ ನಡೆಸಿತು. ದಾಳಿಯ ನೋಟಿಸ್ ಕೊಟ್ಟು ಮನೆ ಒಳಗೆ ಪ್ರವೇಶಿಸಿರುವ ಅಧಿಕಾರಿಗಳು, ಮನೆಯವರ ಮೊಬೈಲ್ ಗಳನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಐಎಂಎ ನಿಂದ ಚಿನ್ನದ ಆಭರಣ ಹಾಗೂ ಕೋಟ್ಯಂತರ ರೂಪಾಯಿ ಬೇಗ್ ಪಡೆದ ಆರೋಫಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸಿರುವ ಅಧಿಕಾರಿಗಳು ಹೆಚ್ಚುವರಿ ಸಾಕ್ಷಾಧಾರಗಳ ಸಂಗ್ರಹಕ್ಕೆ ಮುಂದಾಗಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ರೋಷನ್ ಬೇಗ್ ಅವರನ್ನು ಬಂಧಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆ ಮುಂದೆ ಹಾಜರು ಪಡಿಸಿದ್ದರು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನ ಕ್ವಾರೆಂಟೈನ್ ಸೆಲ್ನಲ್ಲಿದ್ದಾರೆ. ಬಂಧನ ಆಗುತ್ತಿದ್ದಂತೆ ಇದೀಗ ಸಿಬಿಐ ದಾಳಿ ನಡೆದಿದೆ.
ಐಎಂಎ ಕಂಪನಿಯಿಂದ 200 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದ ಆರಂಭಿಕ ದಿನಗಳಲ್ಲಿ ಐಎಂಎ ಸಂಸ್ಥಾಪಕ, ಸಿಇಓ ಮನ್ಸೂರ್ ಖಾನ್ ಅವರೇ ರೋಷನ್ ಬೇಗ್ ಅವರ ಮೇಲೆ ಆರೋಪ ಮಾಡಿದ್ದರು. ಐಎಂಎ ಕಂಪನಿಯಿಂದ ರೋಷನ್ ಬೇಗ್ ಬೇಕಾದಾಗೆಲ್ಲಾ ಹಣ ಪಡೆದಿದ್ದಾರೆ. ಅದನ್ನು ವಾಪಸು ಕೇಳಿದಾಗ ಸ್ಥಳೀಯ ರೌಡಿಗಳಿಂದ ಬೆದರಿಸಿದ್ದರು ಎಂಬ ಅಡಿಯೋ ಅಂದಿನ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರಿಗೆ ಮನ್ಸೂರ್ ಆಲಿಖಾನ್ ಅವರೇ ಕಳಿಸಿಕೊಟ್ಟಿದ್ದರು.
A search by the Central Bureau of Investigation (CBI) is underway at the Bengaluru residence of former Karnataka minister R Roshan Baig.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm