ಬ್ರೇಕಿಂಗ್ ನ್ಯೂಸ್
23-11-20 12:35 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 23: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದೆ. ಪುಲಿಕೇಶೀನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಬೆಳಗಿನ ಜಾವ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ಮನೆ ಮೇಲೆ ದಾಳಿ ನಡೆಸಿತು. ದಾಳಿಯ ನೋಟಿಸ್ ಕೊಟ್ಟು ಮನೆ ಒಳಗೆ ಪ್ರವೇಶಿಸಿರುವ ಅಧಿಕಾರಿಗಳು, ಮನೆಯವರ ಮೊಬೈಲ್ ಗಳನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಐಎಂಎ ನಿಂದ ಚಿನ್ನದ ಆಭರಣ ಹಾಗೂ ಕೋಟ್ಯಂತರ ರೂಪಾಯಿ ಬೇಗ್ ಪಡೆದ ಆರೋಫಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸಿರುವ ಅಧಿಕಾರಿಗಳು ಹೆಚ್ಚುವರಿ ಸಾಕ್ಷಾಧಾರಗಳ ಸಂಗ್ರಹಕ್ಕೆ ಮುಂದಾಗಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ರೋಷನ್ ಬೇಗ್ ಅವರನ್ನು ಬಂಧಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆ ಮುಂದೆ ಹಾಜರು ಪಡಿಸಿದ್ದರು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನ ಕ್ವಾರೆಂಟೈನ್ ಸೆಲ್ನಲ್ಲಿದ್ದಾರೆ. ಬಂಧನ ಆಗುತ್ತಿದ್ದಂತೆ ಇದೀಗ ಸಿಬಿಐ ದಾಳಿ ನಡೆದಿದೆ.
ಐಎಂಎ ಕಂಪನಿಯಿಂದ 200 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದ ಆರಂಭಿಕ ದಿನಗಳಲ್ಲಿ ಐಎಂಎ ಸಂಸ್ಥಾಪಕ, ಸಿಇಓ ಮನ್ಸೂರ್ ಖಾನ್ ಅವರೇ ರೋಷನ್ ಬೇಗ್ ಅವರ ಮೇಲೆ ಆರೋಪ ಮಾಡಿದ್ದರು. ಐಎಂಎ ಕಂಪನಿಯಿಂದ ರೋಷನ್ ಬೇಗ್ ಬೇಕಾದಾಗೆಲ್ಲಾ ಹಣ ಪಡೆದಿದ್ದಾರೆ. ಅದನ್ನು ವಾಪಸು ಕೇಳಿದಾಗ ಸ್ಥಳೀಯ ರೌಡಿಗಳಿಂದ ಬೆದರಿಸಿದ್ದರು ಎಂಬ ಅಡಿಯೋ ಅಂದಿನ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರಿಗೆ ಮನ್ಸೂರ್ ಆಲಿಖಾನ್ ಅವರೇ ಕಳಿಸಿಕೊಟ್ಟಿದ್ದರು.
A search by the Central Bureau of Investigation (CBI) is underway at the Bengaluru residence of former Karnataka minister R Roshan Baig.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm